ಕಲಿಕೆ ಎನ್ನುವುದು ನಿರಂತರ : ಸಿಆರ್ಪಿ ಸ್ವಯಂಪ್ರಭಾ
Learning is continuous : CRP Swayamprabha
ಕಲಿಕೆ ಎನ್ನುವುದು ನಿರಂತರ : ಸಿಆರ್ಪಿ ಸ್ವಯಂಪ್ರಭಾ
ಕಂಪ್ಲಿ 21: ತಾಲೂಕಿನ ನೆಲ್ಲುಡಿ ಗ್ರಾಪಂಯ ಶಾಂತಿನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮ ಶುಕ್ರವಾರ ಜರಗಿತು. ಸಿಆರ್ಪಿ ಸ್ವಯಂಪ್ರಭಾ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಲಿಕಾ ಹಬ್ಬ ಮಕ್ಕಳಲ್ಲಿ ನೆನಪಿನ ಶಕ್ತಿ ವೃದ್ಧಿಸುವ ಪೂರಕ ಚಟುವಟಿಕೆಗಳಿಗೆ ಒತ್ತು ನೀಡುತ್ತದೆ.
ಕಲಿಕೆ ಎನ್ನುವುದು ನಿರಂತರವಾಗಿದೆ. ವೃತ್ತಿ, ಜ್ಞಾನ ಸೇರಿದಂತೆ ಮಕ್ಕ ಉತ್ತಮ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆಸ ಎಂದು ಸಲಹೆ ನೀಡದರು. ನಂತರ ಮುಖ್ಯಗುರು ನಾಗರಾಜ್ ಮಾತನಾಡಿ, ಮಕ್ಕಳ ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯು ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ಕಲಿಕಾ ಹಬ್ಬದಿಂದ ಶೈಕ್ಷಣಿಕ ಬಲವರ್ಧನೆ, ಸಂಖ್ಯಾಜ್ಞಾನ ಹೆಚ್ಚಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪಾಂಡುರಂಗ, ಭವ್ಯಶ್ರೀ, ರಂಜಾನ್ ಬಿ, ಎಸ್.ರಾಮಪ್ಪ, ಶಶಿಕಲಾ, ವಾಣಿ, ರಮೇಶ್, ರಾಜೇಶ್ವರಿ, ಜ್ಯೋತಿ ತೀರ್ುಗಾರರಾಗಿ ಕಾರ್ಯನಿರ್ವಹಿಸಿದರು. ಮಕ್ಕಳು ವಿವಿಧ ಕಲಿಕಾ ಕಲೆಯೊಂದಿಗೆ ಗಮನ ಸೆಳೆದರು. ಈ ಸಂದರ್ಭದಲ್ಲಿ ಸುಧಾಕರ್, ರಾಜಸಾಬ್, ರಾಘವೇಂದ್ರ, ಜವಳಿ ಮಂಜುನಾಥ್, ಕೋರೆ ತಿಪ್ಪಣ್ಣ, ಮಮತಾ, ಮಂಜುನಾಥ್ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 