ಕಲಿಕೆ ಎನ್ನುವುದು ನಿರಂತರ : ಸಿಆರ್ಪಿ ಸ್ವಯಂಪ್ರಭಾ
Learning is continuous : CRP Swayamprabha
ಕಲಿಕೆ ಎನ್ನುವುದು ನಿರಂತರ : ಸಿಆರ್ಪಿ ಸ್ವಯಂಪ್ರಭಾ
ಕಂಪ್ಲಿ 21: ತಾಲೂಕಿನ ನೆಲ್ಲುಡಿ ಗ್ರಾಪಂಯ ಶಾಂತಿನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮ ಶುಕ್ರವಾರ ಜರಗಿತು. ಸಿಆರ್ಪಿ ಸ್ವಯಂಪ್ರಭಾ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಲಿಕಾ ಹಬ್ಬ ಮಕ್ಕಳಲ್ಲಿ ನೆನಪಿನ ಶಕ್ತಿ ವೃದ್ಧಿಸುವ ಪೂರಕ ಚಟುವಟಿಕೆಗಳಿಗೆ ಒತ್ತು ನೀಡುತ್ತದೆ.
ಕಲಿಕೆ ಎನ್ನುವುದು ನಿರಂತರವಾಗಿದೆ. ವೃತ್ತಿ, ಜ್ಞಾನ ಸೇರಿದಂತೆ ಮಕ್ಕ ಉತ್ತಮ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆಸ ಎಂದು ಸಲಹೆ ನೀಡದರು. ನಂತರ ಮುಖ್ಯಗುರು ನಾಗರಾಜ್ ಮಾತನಾಡಿ, ಮಕ್ಕಳ ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯು ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ಕಲಿಕಾ ಹಬ್ಬದಿಂದ ಶೈಕ್ಷಣಿಕ ಬಲವರ್ಧನೆ, ಸಂಖ್ಯಾಜ್ಞಾನ ಹೆಚ್ಚಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪಾಂಡುರಂಗ, ಭವ್ಯಶ್ರೀ, ರಂಜಾನ್ ಬಿ, ಎಸ್.ರಾಮಪ್ಪ, ಶಶಿಕಲಾ, ವಾಣಿ, ರಮೇಶ್, ರಾಜೇಶ್ವರಿ, ಜ್ಯೋತಿ ತೀರ್ುಗಾರರಾಗಿ ಕಾರ್ಯನಿರ್ವಹಿಸಿದರು. ಮಕ್ಕಳು ವಿವಿಧ ಕಲಿಕಾ ಕಲೆಯೊಂದಿಗೆ ಗಮನ ಸೆಳೆದರು. ಈ ಸಂದರ್ಭದಲ್ಲಿ ಸುಧಾಕರ್, ರಾಜಸಾಬ್, ರಾಘವೇಂದ್ರ, ಜವಳಿ ಮಂಜುನಾಥ್, ಕೋರೆ ತಿಪ್ಪಣ್ಣ, ಮಮತಾ, ಮಂಜುನಾಥ್ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 