ದೇವದಾಸಿ ಮಹಿಳೆಯರಿಗೆ ಕಾನೂನು ಅರಿವು ಆರೋಗ್ಯ ಕಾರ್ಯಕ್ರಮ
Legal Awareness Health Program for Devadasi Women
ದೇವದಾಸಿ ಮಹಿಳೆಯರಿಗೆ ಕಾನೂನು ಅರಿವು ಆರೋಗ್ಯ ಕಾರ್ಯಕ್ರಮ
ಹೂವಿನ ಹಡಗಲಿ: ದೇವದಾಸಿ ಮಹಿಳೆಯರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಬೇಕು ಎಂದು ರಾಜ್ಯ ಮಾಜಿ ದೇವದಾಸಿ ಮಹಿಳೆಯರ ಕ್ಷೇಮಾಭಿವೃದ್ಧಿ ಒಕ್ಕೂಟದ ಅಧ್ಯಕ್ಷ ಎಚ್ ದಂಡೆಮ್ಮ ಹೇಳಿದರು.ತಾಲೂಕಿನ ಸೋಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಮಾಜಿ ದೇವದಾಸಿ ಮಹಿಳೆಯರಿಗೆ ಕಾನೂನು ಅರಿವು ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ನಿಮ್ಮ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನಿಮ್ಮೆಲ್ಲರ ಪಾತ್ರ ಮಹತ್ವದ್ದು ಎಂದು ತಿಳಿಸಿದರು.ವಕೀಲರಾದ ಸುಜಾತಾ ಮಹಿಳೆಯರು ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಕಾನೂನು ಅರಿವಿನ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.ಮಹಿಳೆಯರ ಅಭಿವೃದ್ಧಿ ಬಗ್ಗೆ ಇಲಾಖೆಯ ವತಿಯಿಂದ ಅನೇಕ ಕಾನೂನುಗಳು ಇವೆ.ಸಲಹೆ ಸಹಕಾರ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.ಯೋಜನಾ ಅನುಷ್ಠಾನ ಅಧಿಕಾರಿ ಎಂ ಜಿ ಹಾಲನಗೌಡ, ತಾಲೂಕು ಎ ಐ ಟಿ ಯು ಸಿ ಮುಖಂಡ ಹಲಗಿ ಸುರೇಶ, ಸೋಗಿ ದಂಡೆಮ್ಮ, ಚೆನ್ನವೀರಮ್ಮ, ಗಂಗಮ್ಮ ಇತರರು ಉಪಸ್ಥಿತರಿದ್ದರು.ಸುಮಾರು 30 ಕ್ಕೂ ಹೆಚ್ಚು ಮಹಿಳೆಯರು ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 