ಮಾಜಿ ದೇವದಾಸಿಯರಿಗೆ ಕಾನೂನು ಅರಿವು
Legal awareness for former Devadasis
ಮಾಜಿ ದೇವದಾಸಿಯರಿಗೆ ಕಾನೂನು ಅರಿವು
ಹೂವಿನಹಡಗಲಿ 9 : ತಾಲ್ಲೂಕಿನ ಹಿರೇಹಡಗಲಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ.ದೇವದಾಸಿ ಪುನರ್ವಸತಿ ಯೋಜನೆ ವಿಜಯನಗರ ಜಿಲ್ಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಕಾನೂನು ಅರಿವು ಕಾರ್ಯಕ್ರಮ ಜರುಗಿತು. ಅದ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷೆ ವಿದ್ಯಾಶ್ರೀ ಗಂಗಾಧರ್ ಮಾತನಾಡಿ ಸರ್ಕಾರ ಮಾಜಿ ದೇವದಾಸಿ ಮಹಿಳೆಯರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ವಕೀಲರಾದ ಕೊಟ್ರೇಶ್ ಕರ್ಜಗಿ ರವರು ಮಾತನಾಡಿ ದೇವದಾಸಿ ಯರಿಗೆ ಸಿಗುವ ಸೌಲಭ್ಯಗಳನ್ನು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಬಿ.ನಿರ್ಮಾಲ. ಗ್ರಾ. ಪಂ ಸದಸ್ಯ ಕೆ ಉಚ್ಚೇಂಗೆಪ್ಪ . ಅಂಗನವಾಡಿ ಕಾರ್ಯಕರ್ತೆ .ಮಹಾಲಂಬಿ. ವಿಶಾಲಾಕ್ಷಿ ಎಐಟಿಯುಸಿ ಮುಖಂಡರಾದ ಹಲಗಿ ಸುರೇಶ್ ಇದ್ದರು. ಪುನರ ಅನುಷ್ಠಾನ ಅಧಿಕಾರಿ ಎ.ಜಿ.ಹಾಲನಗೌಡ ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 