ಮಾಜಿ ದೇವದಾಸಿಯರಿಗೆ ಕಾನೂನು ಅರಿವು
Legal awareness for former Devadasis
ಮಾಜಿ ದೇವದಾಸಿಯರಿಗೆ ಕಾನೂನು ಅರಿವು
ಹೂವಿನಹಡಗಲಿ 9 : ತಾಲ್ಲೂಕಿನ ಹಿರೇಹಡಗಲಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ.ದೇವದಾಸಿ ಪುನರ್ವಸತಿ ಯೋಜನೆ ವಿಜಯನಗರ ಜಿಲ್ಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಕಾನೂನು ಅರಿವು ಕಾರ್ಯಕ್ರಮ ಜರುಗಿತು. ಅದ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷೆ ವಿದ್ಯಾಶ್ರೀ ಗಂಗಾಧರ್ ಮಾತನಾಡಿ ಸರ್ಕಾರ ಮಾಜಿ ದೇವದಾಸಿ ಮಹಿಳೆಯರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ವಕೀಲರಾದ ಕೊಟ್ರೇಶ್ ಕರ್ಜಗಿ ರವರು ಮಾತನಾಡಿ ದೇವದಾಸಿ ಯರಿಗೆ ಸಿಗುವ ಸೌಲಭ್ಯಗಳನ್ನು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಬಿ.ನಿರ್ಮಾಲ. ಗ್ರಾ. ಪಂ ಸದಸ್ಯ ಕೆ ಉಚ್ಚೇಂಗೆಪ್ಪ . ಅಂಗನವಾಡಿ ಕಾರ್ಯಕರ್ತೆ .ಮಹಾಲಂಬಿ. ವಿಶಾಲಾಕ್ಷಿ ಎಐಟಿಯುಸಿ ಮುಖಂಡರಾದ ಹಲಗಿ ಸುರೇಶ್ ಇದ್ದರು. ಪುನರ ಅನುಷ್ಠಾನ ಅಧಿಕಾರಿ ಎ.ಜಿ.ಹಾಲನಗೌಡ ಸ್ವಾಗತಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 