ಕನಕದಾಸರ ಆದರ್ಶವನ್ನು ಪಾಲಿಸಿ ಉತ್ತಮ ಸಮಾಜ ಕಟ್ಟೋಣ: ತಹಶೀಲ್ದಾರ ರವೀಂದ್ರ ಹಾದಿಮನಿ
Let's follow the ideals of Kanakadasa and build a better society: Tahsildar Ravindra Hadimani
ಕಾಗವಾಡ 08: ತಾಲೂಕಾಡಳಿತದ ವತಿಯಿಂದ ಭಕ್ತಶ್ರೇಷ್ಟ ಕನಕದಾಸರ 538ನೇ ಜಯಂತಿಯನ್ನು ಶನಿವಾರ ದಿ. 08 ರಂದು ಅದ್ದೂರಿಯಾಗಿ ಆಚರಿಸಿಲಾಯಿತು. ತಹಶೀಲ್ದಾರ ಕಚೇರಿ ಹಾಗೂ ಚೆನ್ನಮ್ಮ ವೃತ್ತದಲ್ಲಿರುವ ಕನಕದಾಸರ ಭಾವಚಿತ್ರಕ್ಕೆ ತಹಶೀಲ್ದಾರ ರವೀಂದ್ರ ಹಾದಿಮನಿ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕನಕದಾಸರು ಸಮಾಜದ ಅಂಕುಡೊಂಕುಗಳು, ಶೋಷಣೆಗಳನ್ನು ತಮ್ಮ ಕಾವ್ಯಗಳ ಮುಖಾಂತರ ಹೊಡೆದೊಡಿಸಿದ್ದಾರೆ. ಅವರ ತತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು, ಅವರ ಆದರ್ಶಗಳನ್ನು ಪಾಲಿಸಿ, ಉತ್ತಮ ಸಮಾಜವನ್ನು ಕಟ್ಟಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ ಅಣ್ಣಾಸಾಬ ಕೋರೆ, ಪಿಎಸ್ಐ ರಾಘವೇಂದ್ರ ಖೋತ, ಕ್ಷೇತ್ರಶಿಕ್ಷಣಾಧಿಕಾರಿ ಪಿ.ಬಿ ಮಧಬಾವಿ, ಪ.ಪಂ. ಮುಖ್ಯಾಧಿಕಾರಿ ಕೆ.ಕೆ. ಗಾವಡೆ, ಸುರೇಖಾ ಬಸನಾಯಿಕ, ಜ್ಯೋತಿಗೌಡಾ ಪಾಟೀಲ, ಕಾಕಾ ಪಾಟೀಲ, ಪ್ರಕಾಶ ಪಾಟೀಲ, ನಾಥಗೌಡ ಪಾಟೀಲ, ಸಿದ್ದು ಭಾನುಸೆ, ಸದಾಶಿವ ಪೂಜಾರಿ, ಸಿದ್ದು ಒಡೆಯರ, ಗಣೇಶ ಕೋಳೆಕರ, ಕಿತ್ತೂರು ಕರ್ನಾಟಕ ಸೇನೆಯ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಕುರುಬರ ಯುವ ಮೋರ್ಚಾ ಅಧ್ಯಕ್ಷ ಸಿದ್ದರಾಮ ಬಸ್ತವಾಡ, ಕುರುಬ ಸಮಾಜದ ತಾಲೂಕಾ ಅಧ್ಯಕ್ಷ ಪ್ರಕಾಶ ಢಂಗ, ಉಪಾಧ್ಯಕ್ಷ ರಾವಸಾಹೇಬ ಜುಗಳೆ ಸೇರಿದಂತೆ ಅನೇಕರು ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 