ಮಕ್ಕಳಿಗೆ ಬೈಸಿಕಲ್ ಕೊಡುವ ಯೋಜನೆಯನ್ನು ಪ್ರಾರಂಭಿಸಲಿ: ಶಾಸಕ ಐಹೊಳೆ
Let's start a scheme to provide bicycles to children: MLA Aihole
ರಾಯಬಾಗ 06: ಬಿಜೆಪಿ ಸರ್ಕಾರದ ಆಡಳಿತ ಇದ್ದಾಗ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸುವ ಯೋಜನೆ ಜಾರಿಯಲ್ಲಿತ್ತು. ಈಗ ಕಾಂಗ್ರೆಸ್ ಸರ್ಕಾರ ಯೋಜನೆಯನ್ನು ಕೈ ಬಿಟ್ಟಿರುವುದು ಸರಿಯಲ್ಲ. ದೂರದ ತೋಟಗಳಿಂದ ಹಾಗೂ ಬೇರೆ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಮಕ್ಕಳಿಗೆ ಬೈಸಿಕಲ್ ಕೊಡುವುದನ್ನು ಪ್ರಾರಂಭಿಸಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.
ತಾಲೂಕಿನ ಜಲಾಲಪುರ ಗ್ರಾಮದ ಡಿ ಜೆ ಹೆರವಾಡೆ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಿ ಮಾತನಾಡಿದ ಅವರು ಇಂದಿನ ಮಕ್ಕಳೇ ನಾಳಿನ ನಾಡಿನ ನಾಗರಿಕರು. ಸರ್ಕಾರಗಳು ಯಾವುದೇ ಬರಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಅವರಿಗೆ ಅನುಕೂಲ ಮಾಡಿಕೊಡುಬೇಕು. ವಿದ್ಯಾರ್ಥಿಗಳು ಯಾವುದೇ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.
ಗ್ರಾಮ ಪಂಚಾಯತ ಅಧ್ಯಕ್ಷ ವಿನಾಯಕ ಪವಾರ, ನಾಮದೇವ ಕಾಂಬಳೆ, ಬಸವರಾಜ ಅವನ್ನವರ, ವಸಂತ ಕಾಂಬಳೆ, ರಾಜು ಜಾದವ ಸದಾಶಿವ ಜಗದಾಳೆ, ಬಸ್ಸು ಚೌಗಲೆ, ಬಸಗೌಡ ಪಾಟೀಲ, ಕಿರಣ ಕನದಾಳೆ, ದೀಲೀಪ ಪವಾರ, ನಾನಾ ಸೋನಾರ, ರಾಜು ಶೇಲಾರ, ದೀಲೀಪ ಹವಾಲ್ದಾರ, ಸಾವಂತ ಪಾಟೀಲ, ದತ್ತಾ ಸಾವಂತ,ವಿ .ಬಿ . ಬನಶಂಕರಿ, ಮುಖ್ಯ್ಯೊಪಾಧ್ಯಾಯರು, ಶಿಕ್ಷಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 