ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸೋಣ : ಅಸ್ಕಿ
Let's work hard for the success of the Taluk Sahitya Sammelan: Aski
ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸೋಣ : ಅಸ್ಕಿ
ದೇವರಹಿಪ್ಪರಗಿ 14: ಪಟ್ಟಣದಲ್ಲಿ ಸಮಾಜ ಸೇವಕ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ಸಿ.ಬಿ.ಅಸ್ಕಿ ಅವರನ್ನು ಕಂಡು.ಡಿ.27. ತಿಂಗಳಲ್ಲಿ ಜರುಗುವ ತಾಲೂಕ ಪ್ರಥಮ ಸಾಹಿತ್ಯ ಸಮ್ಮೇಳನ ಕುರಿತಂತೆ ಶನಿವಾರದಂದು ಸಂಘಟಕರಿಂದ ಸಮಾಲೋಚನೆ ಮಾಡಲಾಯಿತು.ನಂತರ ಮಾತನಾಡಿದ ಅವರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಾಯ ಸಹಕಾರ ನೀಡಲಾಗುವುದು.ಸಮ್ಮೇಳನಅರ್ಥಪೂರ್ಣವಾಗಿ ಆಚರಿಸುವುದು ಎಲ್ಲಾ ಜನರ ಆಶಯವಾಗಬೇಕು.
ಸಮ್ಮೇಳನ ಆಯೋಜಿಸಿರುವುದು ತುಂಬಾ ಸಂತೋಷದ ವಿಷಯ, ಕನ್ನಡ ಸಾಹಿತ್ಯ ನಾಡು ನುಡಿ, ನೆಲ ಜಲದ ಕುರಿತು ಚರ್ಚೆಯಾಗಿ ಸಮ್ಮೇಳನ ಅಭಿವೃದ್ಧಿ ಪೂರಕವಾಗಬೇಕು. ಸಮ್ಮೇಳನದಲ್ಲಿ ಉತ್ತಮ ವಿಷಯಗಳು ಮಂಡನೆ ಯಾಗಬೇಕು ಹಾಗೂ ಸಮ್ಮೇಳನಾದ ಯಶಸ್ಸಿಗೆ ತನು ಮನ ಧನ ಗಳಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.ಸಂದರ್ಭದಲ್ಲಿ ಕ.ಸಾ.ಪ ತಾಲ್ಲೂಕಾಧ್ಯಕ್ಷ ಜಿ.ಪಿ.ಬಿರಾದಾರ ಸಮ್ಮೇಳನ ಯಶಸ್ವಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ),ಪ.ಪಂ ಸದಸ್ಯರಾದ ಬಸೀರ ಅಹ್ಮದ್ ಬೇಪಾರಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ರೀಯಾಜ ಯಲಿಗಾರ, ಮುಖಂಡರುಗಳಾದ ಪ್ರಕಾಶ ಮಲ್ಹಾರಿ, ಕಾಶೀನಾಥ ಕೋರಿ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 