ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ: ಸಿದ್ದಣ್ಣಾ ದುರದುಂಡಿ
Let sports talents develop at rural level: Siddanna Duradundi
ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ: ಸಿದ್ದಣ್ಣಾ ದುರದುಂಡಿ
ಮಾಂಜರಿ 22: ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷರ ಸಿದ್ದಣ್ಣಾ ದುರದುಂಡಿ ಹೇಳಿದ್ದಾರೆ. ಅವರು ಶನಿವಾರ ದಿ. 22ರಂದು ಮಾಂಜರಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ್ ಕಲಾ ಮತ್ತು ಕ್ರೀಡಾ ಯುವಕ ಮಂಡಳ ಮಾಂಜರಿ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ತಾಲೂಕಾ ಘಟಕ ಚಿಕ್ಕೋಡಿ. ಸರ್ವೋದಯ ಪದವಿ ಪೂರ್ವ ಮಹಾವಿದ್ಯಾಲಯ ಮಾಂಜರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಯುವಕ ಸಂಘಗಳಿರುವಲ್ಲಿ ಉತ್ಸಾಹಿ ಯುವತಿ ಮಂಡಳಿ ಇದ್ದರೆ ಅಲ್ಲಿ ಸವಾಂರ್ಗೀಣ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಸಮಾಜ ಸೇವಕ ಸಿದ್ದಾರ್ಥ ಗಾಯಾಗೋಳ ಮಾಂಜರಿಯಲ್ಲಿ ಕೂಡ ಯುವತಿ ಮಂಡಳಿಯ ಅವಶ್ಯಕತೆಯಿದ್ದು ಉತ್ಸಾಹಿ ಯುವತಿಯರ ಸಂಘಟನೆಯಾಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಗ್ರಾಮ ಪಂಚಾಯತ ಅಧ್ಯಕ್ಷೆ ಅನಿತಾ ಬಾಳಾಸಾಬ ದಯಾರಕರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಅಂಕಲಿ ಪೊಲೀಸ್ ಠಾಣೆ ಎಎಸ್ಐ ಕ.ಬಿ.ಹಾದಿಮನಿ, ಆರ್.ಡಿ. ಕದಂ, ಕೆ.ಎಸ್ ಸಾಳುಂಕೆ, ಗೀರೀಶ್ ಬಿಸಲನಾಯ, ಕುಮುದಾ ನಾಯಿಕ, ಎಂ.ಡಿ ಕಾಂಬಳೆ, ಚೇತನ ಸಾರಾಪೂರೆ, ಯಲ್ಲಾಲಿಂಗ ವಾಳದ, ರವೀಂದ್ರ ವಡವಡೆ, ಎಲ್ಲಾ ಶಾಲೆಯ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಅಧ್ಯಕ್ಷ ರಾಘವೇಂದ್ರ ಲಂಬುಗೋಳ ಸ್ವಾಗತಿಸಿದರು. ಎಂ ಬಿ ಕೋಳಿ ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 