ಕನ್ನಡ ಜನಪದವು ವಾಣಿಜ್ಯೀಕರಣದತ್ತ ಸಾಗಲಿ : ಪ್ರೊ. ಚಂದ್ರಶೇಖರ ವಸ್ತ್ರದ
Let the Kannada folk move towards commercialization: Prof. Chandrasekhara Vastra
ಕನ್ನಡ ಜನಪದವು ವಾಣಿಜ್ಯೀಕರಣದತ್ತ ಸಾಗಲಿ : ಪ್ರೊ. ಚಂದ್ರಶೇಖರ ವಸ್ತ್ರದ
ಗದಗ 20: ಮಾತೃ ಭಾಷೆಯಾದ ಕನ್ನಡ ಭಾಷೆ ನಶಿಸುತ್ತಿದೆ. ಕಾಸರಗೋಡು ಪ್ರದೇಶವು ಕೇರಳ ಪಾಲಾಯಿತು. ಬೆಳಗಾವಿ ಬೀದರ್ ನಲ್ಲಿ ಮರಾಠಿ ಭಾಷಿಕರ ಸಂಖ್ಯೆ ಹೆಚ್ಚತ್ತಿದೆ. ರಾಯಚೂರು ಭಾಗವು ತೆಲುಗು ಭಾಷಿಕರ ಪಾಲಾಗುತ್ತಿದೆ ಎಂದು ಸಮ್ಮೇಳನ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಅವರು ಹೇಳಿದರು. ಜಿಲ್ಲೆಯ ಗಜೇಂದ್ರಗಡದಲ್ಲಿ ಸೋಮವಾರ ಜರುಗಿದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ಭಾಷಣ ಮಾಡಿದ ಅವರು, ಬೆಲೂರಿನ ಶಿಲಾ ಬಾಲಕೆಯರ ಒಂದು ಶಿಲೆಯನ್ನು ಕೆತ್ತಿದವರು ಗದಗ ಜಿಲ್ಲೆಯವರು ಎಂದು ಗದಗ ಜಿಲ್ಲೆಯ ಮಹಾ ಸಾಹಿತ್ಯ ಶಿಲ್ಪಕಲಾ ಸಾಧಕರ ನೀಡಿದೆ. ನಾಡಿನ ಶಿಲ್ಪಕಲೆಗಳ ರಚನೆಯಲ್ಲಿ ಜಿಲ್ಲೆಯ ಮಹನೀಯರು ನೀಡಿರುವ ಅಪಾರ ಪಾತ್ರದ ಕುರಿತು ವಿವರಿಸಿದರು. ಗ್ರಾಮೀಣ ಕೈಗಾರಿಕೋಧ್ಯಮದಲ್ಲಿ ಜಾನಪದ, ಶಿಲ್ಪಕಲೆ ಬಿತ್ತರಿಸುವ ಕೆಲಸ ಆಗಬೇಕಿದೆ. ವಿಶೇಷವಾಗಿ ಜಾನಪದವನ್ನು ವಾಣಿಜ್ಯೀಕರಣ ಮಾಡಬೇಕಿದೆ ಎಂದರು. ಜಾನಪದಗಳು ವಿಶ್ವವಿದ್ಯಾಲಯ, ಶಿಕ್ಷಣ ಸಂಸ್ಥೆಗಳಲ್ಲಿ ಇದ್ದರೆ ಬೆಳೆಯುವುದಿಲ್ಲ.
ಜಾನಪದಗಳು ಕಲಾವಿದರಿಂದ ಮಾತ್ರ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಜಿಲ್ಲೆಯಲ್ಲಿ ಚಾಮರಸನ ಬಗ್ಗೆ ಸಂಶೋಧನೆ, ಚೆನ್ನವೀರ ಕಣವಿ, ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಸ್ಥಾಪನೆ ಆಗಬೇಕಿದೆ. ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸರ್ಕಾರ ಹೆಚ್ಚು ಉತ್ಸುಕವಾಗಬೇಕು ಎಂದರು. ಸರ್ವಾಧ್ಯಕ್ಷರ ಕೊರಿಕೆಗಳು: * ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ, ಮೂಲಭೂತ ಸೌಕರ್ಯ ಒದಗಿಸುವುದು. * ಸಾಹಿತಿ, ಸಂಗೀತಗಾರ, ಕಲಾವಿದರ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಅಕಾಡೆಮಿ ಸ್ಥಾಪನೆ. * ರೈತ-ಗ್ರಾಹಕರಿಗೆ ಅನುಕೂಲ ಆಗಲು ಗದಗನಲ್ಲಿ ’ಶನಿವಾರ ಸಂತೆ’ ಸ್ಥಾಪನೆ * ಕಪ್ಪತಗುಡ್ಡ ರಕ್ಷಣೆಗೆ ಒಕ್ಕೊರಲಿನ ನಿರ್ಣಯ. * ಜಿಲ್ಲೆಯ ಎಲ್ಲ ಐತಿಹಾಸಿಕ ಸ್ಥಳಗಳ ಉತ್ಖನನ ಆಗಲಿ. * ಜಿಲ್ಲೆಯ ನೀರಾವರಿ ಯೋಜನೆಗಳಿಗೆ ವೇಗ ದೊರಕಲಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 