ಹೈ.ಕ.ಸಮಗ್ರ ಅಭಿವೃದ್ಧಿಗೆ ಪತ್ರ ಚಳುವಳಿ: ಡಾ.ಜನಾರ್ಧನ
ಲೋಕದರ್ಶನ ವರದಿ
ಹೂವಿನಹಡಗಲಿ08: ಇದೇ ತಿಂಗಳು 10ರಂದು ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ಒಂದು ದಿನ ಹೈದ್ರಾಬಾದ್ ಕನರ್ಾಟಕದ ಆರು ಜಿಲ್ಲೆಗಳ ಸಮಗ್ರ ಅಭಿವೃದ್ದಿಗಾಗಿ ಸಕರ್ಾರ ಗಮನ ಸೆಳೆಯಲು ಚಚರ್ಿಸಿ ಪರಿಹರಿಸುವಂತೆ 40 ಜನ ಶಾಸಕರಿಗೆ ಪತ್ರ ಚಳುವಳಿ ನೀಡಲಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಹಕಾರ್ಯದಶರ್ಿ ಡಾ.ಜನಾರ್ಧನ ಕೆ.ಎಸ್. ಹೇಳಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈ.ಕ.ಅನುದಾನದಲ್ಲಿ ಉದ್ಯೋಗ,ಶಿಕ್ಷಣ ಮತ್ತು ಸಮಗ್ರ ಅಭಿವೃದ್ದಿಯಿಂದ ವಂಚಿತರಾಗಿದ್ದೇವೆ.
ಈ ಹಿನ್ನೆಲೆಯಲ್ಲಿ ಡಿ.10ರಂದು ನಡೆಯುವ ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಚಚರ್ಿಸಿ ಹೈ.ಕ.ಭಾಗದ 6ಜಿಲ್ಲೆಗಳ ಸಮಗ್ರ ಅಭಿವೃದ್ದಿ ಒತ್ತಾಯಿಸಿ ಶಾಸಕರಿಗೆ ಪತ್ರ ಚಳುವಳಿ ಮೂಲಕ ಆಗ್ರಹಿಸಲಾಗಿದೆ ಎಂದರು.
371(ಜೆ) ಅಡಿಯಲ್ಲಿ ಖಾಸಗಿ ಕಂಪನಿಯಲ್ಲಿ ಯುವಕರಿಗೆ ಉದ್ಯೋಗ ಸೃಷ್ಠಿಸಬೇಕು. ಶಿಕ್ಷಣ, ಕೈಗಾರಿಕೆ, ಆರೋಗ್ಯ ಬಗ್ಗೆ ಹೆಚ್ಚಿನ ಗಮನ ವಹಿಸಿ ಜಿಲ್ಲೆಯಲ್ಲಿ ವೈದ್ಯರ ಕೊರತೆಯನ್ನು ನಿಗಿಸಬೇಕು.ಸಮರ್ಪಕವಾಗಿ ನರೇಗಾ ಕಾಮಗಾರಿಗಳನ್ನು ಪ್ರಾರಂಭಿಸಿ ವಲಸೆ ಹೋಗುವುದನ್ನು ತಡೆಗಟ್ಟಬೇಕು ಸೇರಿದಂತೆ ಹೈ.ಕ.6ಜಿಲ್ಲೆಗಳ ಸಮಗ್ರ ಅಭಿವೃದ್ದಿಯಾಬೇಕೆಂದು ಒತ್ತಾಯಿಸಿದರು. ಭಾರತ ಕಮ್ಯುನಿಸ್ಟ್ ಪಕ್ಷದ ಸುರೇಶ ಹಲಗೆ, ಜಯಲಕ್ಷ್ಮಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 