ಸಾಮರಸ್ಯದಿಂದ ಬದುಕಿದರೆ ಜೀವನ ಸಾರ್ಥಕವಾಗುವುದು
Life becomes meaningful if we live in harmony
ಸಾಮರಸ್ಯದಿಂದ ಬದುಕಿದರೆ ಜೀವನ ಸಾರ್ಥಕವಾಗುವುದು
ರಾಣಿಬೆನ್ನೂರ 06: ಮನುಷ್ಯ ಹಣಕ್ಕಿಂತ ಗುಣವನ್ನು ಸಂಪಾದಿಸಬೇಕು. ಹಣದಿಂದ ಬದುಕುವುದಿಲ್ಲ. ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯವಿದೆ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದ ಮಹಾರಾಜರು ನುಡಿದರು.
ಇಲ್ಲಿಯ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಜೀರ್ಣೋದ್ಧಾರಗೊಂಡ ದೇವಸ್ಥಾನದ ಲೋಕಾರೆ್ಣ, ಕಳಸಾರೋಹಣ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.
ನಗರಸಭೆ ಸದಸ್ಯ ಮಲ್ಲಣ್ಣ ಅಂಗಡಿ ಮಾತನಾಡಿ, ಭಕ್ತಿಗೆ ಮತ್ತೊಂದು ಹೆಸರು ದೇವಾಂಗ ಸಮಾಜ. ಇಲ್ಲಿನ ಕ್ಷೇತ್ರ ಪವಿತ್ರವಾಗಿದೆ. ದೇವಸ್ಥಾನದಿಂದ ಮನಸ್ಸಿನ ಭಾವನೆಗಳು ಬದಲಾಗುತ್ತದೆ. ನಾನು ಎಂಬುವ ಮನೋಭಾವನೆಯನ್ನು ತೊರೆದು ದೇವರಿಗೆ ಮೊರೆ ಹೋಗಬೇಕು. ಸಮಾಜಕ್ಕೆ ನಮ್ಮನ್ನು ತೊಡಗಿಸಿಕೊಂಡಾಗ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ. ಸಮಾಜಕ್ಕೆ ಏನಾದರೂ ಕೊಡುಗೆ ಹೋದರೆ ಜೀವನಕ್ಕೆ ಅರ್ಥ ಬರುವುದಿಲ್ಲ ಎಂದರು. ನಗರದ ವರ್ತಕ ಜಗದೀಶ ಶೆಟ್ರಗುರುವಿನಮಠ, ತಾಲೂಕ ದೇವಾಂಗ ಸಮಾಜದ ಕಾರ್ಯಾಧ್ಯಕ್ಷ ಗಣೇಶ ಶಿರಗೂರ, ಮುಖಂಡರಾದ ಸಿದ್ದಪ್ಪ ಚಿಕ್ಕಬಿದರಿ, ಕಪತಪ್ಪ ಸಾಲಿಮನಿ, ಮಹಾದೇವಪ್ಪ ಚಕ್ರಸಾಲಿ, ಶೋಭಾ ಮಾರನಾಳ, ಅನುರಾಧ ಗುಳೇದಗುಡ್ಡ, ಚೇತನಾ ಗುಡ್ಡದ, ಬಸವರಾಜ ಮೈಲಾರ, ಗಣೇಶ ಹಾವನೂರ, ಸಂಕಪ್ಪ ಮಾರನಾಳ, ಲಕ್ಷ್ಮೀಕಾಂತ ಹುಲಗೂರ, ಚಂದ್ರಣ್ಣ ಉದಗಟ್ಟಿ, ಜಯಾ ಕುಂಚೂರ, ಭೋಜರಾಜ ಗುಲಗಂಜಿ, ವಿಜಯಲಕ್ಷ್ಮಿ ಬೆಟಗೇರಿ, ನಾಗರತ್ನಾ ದಿಗಿದಿಗಿ, ಸರೋಜ ಕೊಪ್ಪದ, ಗೀರೀಶ ಗುಳೇದಗುಡ್ಡ, ಲಕ್ಷ್ಮಿ ಕದರಮಂಡಲಗಿ, ಗುಡದಯ್ಯ ನೀಲಗುಂದ, ಅಶೋಕ ದುರ್ಗದಶೀಮಿ, ಸುಮಾ ಹಳ್ಳಿ, ಗಣೇಶ ಸಾಲಗೇರಿ ಸೇರಿದಂತೆ ಇತರರಿದ್ದರು.
ಫೋಟೊ:6ಆರ್ಎನ್ಆರ-02ರಾಣಿಬೆನ್ನೂರ: ಇಲ್ಲಿಯ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಜೀರ್ಣೋದ್ಧಾರಗೊಂಡ ದೇವಸ್ಥಾನದ ಲೋಕಾರೆ್ಣ, ಕಳಸಾರೋಹಣದ ಧರ್ಮಸಭೆಯನ್ನು ನಗರಸಭೆ ಸದಸ್ಯ ಮಲ್ಲಣ್ಣ ಅಂಗಡಿ ಉದ್ಘಾಟಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 