ಬೈಲಹೊಂಗಲ: ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮ
ಬೈಲಹೊಂಗಲ 09: ಸಮೀಪದ ಇಂಚಲದ ಶಿವಯೋಗೀಶ್ವರ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯದ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ರಾಷ್ರ್ಟೀಯ ಸೇವಾ ಯೋಜನೆ ಘಟಕ ಇವರ ಸಹಯೋಗದಲ್ಲಿ ಮಿಂಚಿನ ನೋಂದಣಿ ಅಭಿಯಾನ ಅಡಿಯಲ್ಲಿ ಮತದಾರರ ನೋಂದಣಿ ಚೀಟಿ ತಿಳುವಳಿಕೆ ಮೂಡಿಸಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಎಮ್.ಎಸ್.ಮಟ್ಟಿ, ಎಸ್.ಟಿ.ಕಾಂಬಳೆ ಮಾತನಾಡಿ, ಮತದಾನ ಸಮಾನತೆಯ ಪ್ರತೀಕವಾಗಿದ್ದು, ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ನಿಷ್ಪಕ್ಷಪಾತದಿಂದ ಮತಚಲಾವಣೆ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಅತ್ಯಂತ ಶ್ರೇಷ್ಠ ಕಾರ್ಯ, ಇದನ್ನು ಚಲಾವಣೆ ಮಾಡುವುದರ ಬಗ್ಗೆ ವಿದ್ಯಾಥರ್ಿಗಳು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಎಮ್.ಎಸ್.ಕಟ್ಟಿ, ಎಮ.ಬಿ.ಹೂಗಾರ, ಆರ್.ವ್ಹಿ.ಅಣ್ಣಿಗೇರಿ, ಎನ್.ವ್ಹಿ.ಪಾಟೀಲ, ಎಸ್.ಜಿ.ಪಾಟೀಲ, ಎಂ.ಎಂ.ಕೊಡ್ಲಿ, ಎಸ್.ಎಸ್.ರಾಯನಾಯ್ಕರ, ಎನ್.ಎಸ್.ಎಸ್.ಸ್ವಯಂ ಸೇವಕರು, ಉಪನ್ಯಾಸಕ ಸಿಬ್ಬಂದಿ ವರ್ಗ, ವಿದ್ಯಾಥರ್ಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 