ಲಿಂಗೈಕ್ಯ ಕರಿಸಿದ್ದೇಶ್ವರ ಶಿವಾಚಾರ್ಯ ಮಹಾ ರಥೋತ್ಸವ
Lingaykya Karsiddeshwara Shivacharya Maha Rathotsava
ಕಂಪ್ಲಿ 29: ಸಮೀಪದ ಬುಕ್ಕಸಾಗರ ಗ್ರಾಮದ ದಕ್ಷಿಣಕಾಶಿ ಕರಿಸಿದ್ದೇಶ್ವರ ಸಂಸ್ಥಾನದ ಮಠದಲ್ಲಿ ಬಾಲ ತಪಸ್ವಿ ಲಿಂಗೈಕ್ಯ ಷ.ಬ್ರ.ಕರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಮಹಾರಥೋತ್ಸವವು ಅತ್ಯಂತ,ಶ್ರದ್ಧೆ,ಭಕ್ತಿಗಳಿಂದ ವಿಜೃಂಭಣೆಯಿಂದ ಜರುಗಿತು.ಲಿಂಗೈಕ್ಯ ಕರಿಸಿದ್ದೇಶ್ವರ ಶಿವಾಚಾರ್ಯರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪುರಾಣ, ಅಧ್ಯಾತ್ಮಿಕ ಪ್ರವಚನಗಳು, ಸಂಗೀತ, ವಚನ ಸಂಗೀತ, ಹಾಸ್ಯ ಸಂಜೆ, ಭರತನಾಟ್ಯ ವಿಶೇಷವಾಗಿ ವೀರಭದ್ರೇಶ್ವರರ ಗಂಗೆಸ್ಥಳ ಮತ್ತು ಅಗ್ನಿಕುಂಡ ಹಾಯುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆದವು ಇಂದು ಬೆಳಿಗ್ಗೆ ಮಹಾರಥೋತ್ಸವದ ಅಂಗವಾಗಿ ಕರಿಸಿದ್ಧಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ, ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಹಾಗೂ ಮಡಿ ತೇರು ಜರುಗಿದವು. ನಂತರ ಅನ್ನಸಂತರೆ್ಣ ನಡೆಯಿತು.ಸಂಜೆ ವಿವಿಧ ಮಠಾಧೀಶರು, ಸ್ವಾಮಿಗಳ ಸಮ್ಮುಖದಲ್ಲಿ ಸಾವಿರಾರು ಸದ್ಭಕ್ತರು ಜಯ ಘೋಷದ ನಡುವೆ ವಿವಿಧ ಜಾನದಪ ಕಲಾತಂಡಗಳ ಪ್ರದರ್ಶನದೊಂದಿಗೆ ಮಹಾರಥೋತ್ಸವವು ಅದ್ದೂರಿಯಿಂದ ನಡೆಯಿತು. ರು ಭಾಗವಹಸಿದ್ದರು.ರಾರಾವಿಯ ಚಿದಾನಂದ ಗವಾಯಿಗಳ ನಿರ್ದೇಶನದಲ್ಲಿ ಶ್ರೀಕರಿಸಿದ್ದೇಶ್ವರ ಸಂಸ್ಕೃತ,ವೇದ,ಜ್ಯೋತಿಷ್ಯ ಗುರುಕುಲ ಪಾಠಶಾಲೆ ವಿದ್ಯಾರ್ಥಿಗಳಿಂದ ನಾರದ ವಿನೋದ ಮತ್ತು ಮುದುಕನ ಮದುವೆ ನಾಟಕಗಳು ಪ್ರದರ್ಶನಗೊಂಡವು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 