ಲಿಂಗೈಕ್ಯ ಕರಿಸಿದ್ದೇಶ್ವರ ಶಿವಾಚಾರ್ಯ ಮಹಾ ರಥೋತ್ಸವ
Lingaykya Karsiddeshwara Shivacharya Maha Rathotsava
ಕಂಪ್ಲಿ 29: ಸಮೀಪದ ಬುಕ್ಕಸಾಗರ ಗ್ರಾಮದ ದಕ್ಷಿಣಕಾಶಿ ಕರಿಸಿದ್ದೇಶ್ವರ ಸಂಸ್ಥಾನದ ಮಠದಲ್ಲಿ ಬಾಲ ತಪಸ್ವಿ ಲಿಂಗೈಕ್ಯ ಷ.ಬ್ರ.ಕರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಮಹಾರಥೋತ್ಸವವು ಅತ್ಯಂತ,ಶ್ರದ್ಧೆ,ಭಕ್ತಿಗಳಿಂದ ವಿಜೃಂಭಣೆಯಿಂದ ಜರುಗಿತು.ಲಿಂಗೈಕ್ಯ ಕರಿಸಿದ್ದೇಶ್ವರ ಶಿವಾಚಾರ್ಯರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪುರಾಣ, ಅಧ್ಯಾತ್ಮಿಕ ಪ್ರವಚನಗಳು, ಸಂಗೀತ, ವಚನ ಸಂಗೀತ, ಹಾಸ್ಯ ಸಂಜೆ, ಭರತನಾಟ್ಯ ವಿಶೇಷವಾಗಿ ವೀರಭದ್ರೇಶ್ವರರ ಗಂಗೆಸ್ಥಳ ಮತ್ತು ಅಗ್ನಿಕುಂಡ ಹಾಯುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆದವು ಇಂದು ಬೆಳಿಗ್ಗೆ ಮಹಾರಥೋತ್ಸವದ ಅಂಗವಾಗಿ ಕರಿಸಿದ್ಧಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ, ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಹಾಗೂ ಮಡಿ ತೇರು ಜರುಗಿದವು. ನಂತರ ಅನ್ನಸಂತರೆ್ಣ ನಡೆಯಿತು.ಸಂಜೆ ವಿವಿಧ ಮಠಾಧೀಶರು, ಸ್ವಾಮಿಗಳ ಸಮ್ಮುಖದಲ್ಲಿ ಸಾವಿರಾರು ಸದ್ಭಕ್ತರು ಜಯ ಘೋಷದ ನಡುವೆ ವಿವಿಧ ಜಾನದಪ ಕಲಾತಂಡಗಳ ಪ್ರದರ್ಶನದೊಂದಿಗೆ ಮಹಾರಥೋತ್ಸವವು ಅದ್ದೂರಿಯಿಂದ ನಡೆಯಿತು. ರು ಭಾಗವಹಸಿದ್ದರು.ರಾರಾವಿಯ ಚಿದಾನಂದ ಗವಾಯಿಗಳ ನಿರ್ದೇಶನದಲ್ಲಿ ಶ್ರೀಕರಿಸಿದ್ದೇಶ್ವರ ಸಂಸ್ಕೃತ,ವೇದ,ಜ್ಯೋತಿಷ್ಯ ಗುರುಕುಲ ಪಾಠಶಾಲೆ ವಿದ್ಯಾರ್ಥಿಗಳಿಂದ ನಾರದ ವಿನೋದ ಮತ್ತು ಮುದುಕನ ಮದುವೆ ನಾಟಕಗಳು ಪ್ರದರ್ಶನಗೊಂಡವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 