ಅಮ್ಮಿನಬಾವಿ ಯುಕೋ ಬ್ಯಾಂಕ್ ಶಾಖೆಯಲ್ಲಿ ಸಾಲ ವಸೂಲಾತಿ ಮೇಳ
ಧಾರವಾಡ .25 : ರೈತರು ಮತ್ತು ಇತರೇ ಉದ್ಯೋಗಸ್ಥರು ಬ್ಯಾಂಕ್ ಮೂಲಕ ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಿ ಸಹಕರಿಸಬೇಕೆಂದು ಬೆಂಗಳೂರಿನ ಯುಕೋ ಬ್ಯಾಂಕ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಟಿ.ಕೆ. ಜಯಕುಮಾರ ಕರೆ ನೀಡಿದರು.
ಅವರು ಬುಧವಾರ ಸಮೀಪದ ತಾಲೂಕಿನ ಅಮ್ಮಿನಬಾವಿ ಗ್ರಾಮದ ಯುಕೋ ಬ್ಯಾಂಕ್ ಶಾಖೆಯಲ್ಲಿ ಹಮ್ಮಿಕೊಂಡಿದ್ದ ಸಾಲ ವಸೂಲಾತಿ ಮೇಳದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಯೋಜನೆ ಅಡಿಯಲ್ಲಿ ಕಟ್ಬಾಕಿ ಸಾಲಗಾರರ ಸಾಲ ಮರುಪಾವತಿಗೆ ಸಾಲ ತೀರಿಸಲು ಪ್ರಸ್ತುತ ಯುಕೋ ಬ್ಯಾಂಕ್ ರಿಯಾಯತಿ ದರದಲ್ಲಿ ಅವಕಾಶ ಕಲ್ಪಿಸಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದು ಸಾಲ ಮರುಪಾವತಿಸಿ ಋಣಮುಕ್ತರಾಗಬೇಕೆಂದು ಅವರು ಮನವಿ ಮಾಡಿದರು.
ಅಮ್ಮಿನಬಾವಿ ಗ್ರಾಮದ ಯುಕೋ ಬ್ಯಾಂಕ್ ಶಾಖೆಯ ಮ್ಯಾನೇಜರ್ ದೀಪಾ ಜೋಶಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಮೇಳದ ಯಶಸ್ಸಿಗೆ ಸಹಕರಿಸಿದರು. ಸುಮಾರು 200 ಜನ ಗ್ರಾಹಕರು ಮೇಳದಲ್ಲಿ ಪಾಲ್ಗೊಂಡಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 