ದೇಶಭ್ರಷ್ಟ ಆಥರ್ಿಕ ಅಪರಾಧಿಗಳ ಮಸೂದೆ ಆಸ್ತಿ ಸ್ವಾಧೀನಕ್ಕೆ ಲೋಕಸಭೆ ಅನುಮೋದನೆ
ನವದೆಹಲಿ 19: ತೆರಿಗೆ ತಪ್ಪಿಸುವುದಲ್ಲದೆ ಕಾನೂನು ಹಿಡಿತದಿಂದ ಪಾರಾಗುವ ಸಲುವಾಗಿ ರಾಷ್ಟ್ರವನ್ನು ತೊರೆಯುವ ದೇಶಭ್ರಷ್ಠ ಆಥರ್ಿಕ ಅಪರಾಧಿಗಳ ವಿರುದ್ಧ ಕ್ರಮ ಜರುಗಿಸುವ ಉದ್ದೇಶದಿಂದ ರೂಪಿಸಲಾಗಿರುವ ದೇಶಭ್ರಷ್ಠ ಆಥರ್ಿಕ ಅಪರಾಧಿಗಳ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದೆ.
ಮಸೂದೆಯನ್ನು ಲೋಕಸಭೆಯು ಧ್ವನಿಮತದಿಂದ ಅಂಗೀಕರಿಸಿದ ಬಳಿಕ ಮಾತನಾಡಿದ ಹಣಕಾಸು ಸಚಿವ ಪಿಯೂಷ್ ಗೋಯಲ್ ಸಕರ್ಾರವು ಮಸೂದೆಯನ್ನು ಸಂಸತ್ತಿಗೆ ಪರಿಚಯಿಸುವುದಕ್ಕೆ ಮುನ್ನವೇ ಈ ಕುರಿತಂತೆ ಕಾನೂನು ಜಾರಿಗೊಳಿಸಿದೆ.
ಇದರಿಂದಾಗಿ ಸಕರ್ಾರ ಕಪ್ಪು ಹಣ ಹಾಗೂ ಇಂತಹಾ ಭ್ರಷ್ಠ ಅಪರಾಧಿಗಳ ಕುರಿತಂತೆ ಎಷ್ಟು ಆಕ್ರಮಣಕಾರಿ ನಿಲುವು ಹೊಂದಿದೆ ಎನ್ನುವುದು ಸ್ಪಷ್ಟವಾಗಲಿದೆ ಎಂದರು.
ಯುಪಿಎ ಸಕರ್ಾರವೇ ಏಕೆ ಇಂತಹಾ ಶಾಸನವನ್ನು ಜಾರಿಗೆ ತಂದಿರಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ದೇಶಭ್ರಷ್ಠ ಆಥರ್ಿಕ ಅಪರಾಧಿಗಳ ಮಸೂದೆ 2013 ಇಂತಹಾ ಅಪರಾಧಿಗಳ ಹೆಸರಿನಲ್ಲಿರುವ ಆಸ್ತಿಗಳನ್ನಲ್ಲದೆ ಬೇನಾಮಿ ಆಸ್ತಿಗಳನ್ನು ಸಹ ಮುತ್ತುಗೋಲು ಹಾಕಿಕೊಳ್ಳುವ ಅಧಿಕಾರವನ್ನು ತನಿಖಾ ಏಜನ್ಸಿಗಳಿಗೆ ನಿಡಲಿದೆ.
ಇದಾಗಲೇ ದೇಶ ತೊರೆದಿರುವವರನ್ನು ಬಂಧಿಸಲು ಈ ಮಸೂದೆ ಅಡಿಯಲ್ಲಿ ಸಾಧ್ಯವಾಗದೆ ಹೋದರೂ ಸಕರ್ಾರಕ್ಕೆ ಆರೋಪಿಗಳನ್ನು ಹೇಗೆ ಬಂಧಿಸಬೇಕೆಂದು ತಿಳಿದಿದೆ ಎಂದು ಗೋಯಲ್ ಹೇಳಿದ್ದಾರೆ.
ಇದೇ ವೇಳೆ ವಿರೋಧ ಪಕ್ಷಗಳು ಸಕರ್ಾರವು ಇಂತಹಾ ದೇಶಭ್ರಷ್ಠರ ವಿರುದ್ಧ ಕ್ರಮ ಜರುಗಿಸುವಲ್ಲಿ ಎಷ್ಟರ ಮಟ್ಟಿಗೆ ಪ್ರಾಮಾಣಿಕವಾಗಿರಲಿದೆ ಎಂದು ಪ್ರಶ್ನಿಸಿದೆ
ಮಸೂದೆ ಅಂಗೀಕಾರಕ್ಕೆ ಮುನ್ನ ಸಂಸತ್ತಿನಲ್ಲಿ ಸುಮಾರು ಎರಡು ಗಂಟೆಗಳ ಕಾಲ ಚಚರ್ೆ ನಡೆದಿದ್ದು ಪ್ರತಿಪಕ್ಷಗಳು ಸಕರ್ಾರದ 'ಪ್ರಾಮಾಣಿಕತೆ'ಯನ್ನು ಪ್ರಶ್ನಿಸಿದೆ. ಆರ್ ಎಸ್ ಪಿದಸ್ಯ ಎನ್. ಕೆ. ಪ್ರೇಮಚಂದ್ರನ್ ಸೇರಿ ಅನೇಕ ಪ್ರತಿಪಕ್ಷ ಸದಸ್ಯರು ವಿಜಯ್ ಮಲ್ಯ, ನೀರವ್ ಮೋದಿ, ಮತ್ತು ಮೆಹುಲ್ ಚೋಕ್ಸಿ ಮುಂತಾದ ಭ್ರಷ್ಠರನ್ನು ಬಿಜೆಪಿ ತನ್ನ ಆಳ್ವಿಕೆಯಲ್ಲಿಯೇ ದೇಶ ತೊರೆಯಲು ಅವಕಾಶ ನಿಡಿದೆ ಎಂದು ಆರೋಪಿಸಿದ್ದಾರೆ.
ಆದರೆ ಬಿಜೆಪಿಯ ನಿಶಿಕಾಂತ್ ದುಬೆ ಸೇರಿದಂತೆ ಹಲವು ಸಂಸದರು ಮಸೂದೆಯನ್ನು ಹಾಗೂ ಸಕರ್ಾರದ ನಿಲುವನ್ನು ಬಲವಾಗಿ ಬೆಂಬಲಿಸಿದ್ದರು.ಮಲ್ಯ, ಮೋದಿ, ಚೋಕ್ಸಿಗಳೆಲ್ಲರೂ ಕಾಂಗ್ರೆಸ್ ಸಕರ್ಾರದ ಸೃಷ್ಟಿ ಎಂದು ಅವರು ಪ್ರತಿಪಾದಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 