ಲಂಡನ್: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವದಂತಿಯನ್ನು ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ತಳ್ಳಿ ಹಾಕಿದ್ದಾರೆ.
ಇಂಗ್ಲೆಂಡ್
ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಧೋನಿ ಅಂಪೈರ್ ಗಳಿಂದ ಚೆಂಡನ್ನು ತೆಗೆದುಕೊಂಡಿದ್ದರು. ಈ
ಘಟನೆಯನ್ನು ತಪ್ಪಾಗಿ ಭಾವಿಸಿದ ಕೆಲ ಮಾಧ್ಯಮಗಳು ಧೋನಿ ಶೀಘ್ರ ನಿವೃತ್ತಿ ಘೋಷಣೆ ಮಾಡಲು ನಿರ್ಧರಿಸಿದ್ದು,
ಇದೇ ಕಾರಣಕ್ಕಾಗಿ ನೆನಪಿನಾರ್ಥವಾಗಿ ಅಂಪೈರ್ ಗಳಿಂದ ಚೆಂಡನ್ನು ತೆಗೆದುಕೊಂಡಿದ್ದಾರೆ ಎಂದು ಸುದ್ದಿ
ಪ್ರಕಟಿಸಲಾಗಿತ್ತು. ಈ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇನ್ನೂ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಇನ್ನು
ಇದೇ ವಿಚಾರವಾಗಿ ಇಂದು ಮಾತನಾಡಿರುವ ಕೋಟ್ ರವಿಶಾಸ್ತ್ಪಿ ಈ ಎಲ್ಲ ವದಂತಿಗಳನ್ನು ತಳ್ಳಿ ಹಾಕಿದ್ದಾರೆ.
ಸದ್ಯದ ಪರಿಸ್ಛಿತಿಯಲ್ಲಿ ಎಂಎಸ್ ಧೋನಿ ಕ್ರಿಕೆಟ್ ಗೆ ನಿವೃತ್ತಿ ಹೇಳುವ ಮಾತೇ ಇಲ್ಲ. ಮಾಧ್ಯಮಗಳ ವರದಿಗಳು
ಕೇವಲ ಊಹಾಪೋಹ ಮತ್ತು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
'ಧೋನಿ
ಎಲ್ಲಿಗೂ ಹೋಗೋದಿಲ್ಲ. ನಿವೃತ್ತಿ ವಿಚಾರದ ಮಾತೇ ಇಲ್ಲ.. ತಂಡಕ್ಕೆ ಧೋನಿ ಅನುಭವದ ಅಗತ್ಯತೆ ಇದ್ದು,
ಈ ಹಿಂದಿನಂತೆಯೇ ಮುಂದೆಯೂ ಕೂಡ ಮುಂದುವರೆಯುತ್ತದೆ. ಇಂಗ್ಲೆಂಡ್ ವಿರುದ್ಧ 3ನೇ ಏಕದಿನ ಪಂದ್ಯದ ವೇಳೆ
ಧೋನಿ ಅಂಪೈರ್ ಗಳಿಂದ ಚೆಂಡು ತೆಗೆದುಕೊಂಡಿದ್ದು ನೆನಪಿನಾರ್ಥವಾಗಿ ಅಲ್ಲ. ಬದಲಿಗೆ 45 ಓವರ್ ಗಳ ಬಳಿಕ
ಚೆಂಡಿನ ಗುಣಮಟ್ಟವನ್ನು ಸಹಾಯಕ ಕೋಚ್ ಭರತ್ ಅರುಣ್ ಅವರಿಗೆ ತೋರಿಸಬೇಕಿತ್ತು. ಈ ಕಾರಣಕ್ಕಾಗಿ ಮಾತ್ರ
ಧೋನಿ ಚೆಂಡನ್ನು ತೆಗೆದುಕೊಂಡಿದ್ದರು ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 