ಹನುಮಂತ ದೇವರ ಕಾರ್ತಿಕೋತ್ಸವ
Lord Hanuman Kartikotsava
ಹನುಮಂತ ದೇವರ ಕಾರ್ತಿಕೋತ್ಸವ
ಬ್ಯಾಡಗಿ 24: ತಾಲೂಕಿನ ಹಳೆಗುಂಗರಗೊಪ್ಪ ಗ್ರಾಮದಲ್ಲಿ ಹನುಮಂತ ದೇವರ ಕಾರ್ತಿಕೋತ್ಸವವು ಡಿ.28 ರಂದು ರಾತ್ರಿ 8 ಘಂಟೆಗೆ ಸಡಗರ ಸಂಭ್ರಮದಿಂದ ಜರುಗಲಿದೆ. ನಂತರ ಅನ್ನಸಂತರೆ್ಣ ಕಾರ್ಯಕ್ರಮವಿದ್ದು, ಡಿ. 29 ರಂದು ಭೂತನ ಸೇವೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹನುಮಂತ ದೇವರ ಕಾರ್ತಿಕೋತ್ಸವದ ನಿಮಿತ್ಯವಾಗಿ ಶಿಗ್ಗಾಂವ ತಾಲೂಕಿನ ಕಬನೂರ ಗ್ರಾಮದ ಶ್ರೀ ಅಲ್ಲಿ ಕೇರಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಕ್ರೀಡಾ ಯುವ ಸಂಘ ಹಾಗೂ ಕನ್ನಡ ಹಾಗೂ ಸಾಂಸ್ಕೃತಿಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಾನಪದ ನೃತ್ಯ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಬಸವರಾಜ ಶಿವಣ್ಣನವರ ಉಧ್ಘಾಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ರಮೇಶ ಸುತ್ತಕೋಟಿ, ಕರಬಸಪ್ಪ ಶಿರಗಂಬಿ, ಎಸ್.ಆರ್.ಪಾಟೀಲ, ಪ್ರಕಾಶ ಬನ್ನಿಹಟ್ಟಿ, ಶಂಭು ಪಾಟೀಲ, ನಾಗರಾಜ್ ಆನ್ವೇರಿ, ಭರಮಪ್ಪ ಗುತ್ತಿ, ದೀಲಿಪಕುಮಾರ ಮೆಗಳಮನಿ, ನಾರಾಯಣಪ್ಪ ದಾಸರ, ಮೀನಾಕ್ಷಿ ತಳವಾರ, ಆರ್.ನಾಗರಾಜ ಹಾಗೂ ಇತರರು ಆಗಮಿಸಲಿದ್ದಾರೆಂದು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 