ರಸ್ತೆ ಡಾಂಬರಿಕರಣ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
MLA Ashok Managuli launches road asphalting work
ರಸ್ತೆ ಡಾಂಬರಿಕರಣ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
ಸಿಂದಗಿ 27: ಕೈಗಾರಿಕಾ ವಲಯದ ಉದ್ಯಮದಾರರ ಬಹುದಿನಗಳ ಬೇಡಿಕೆಗಳಲ್ಲೊಂದಾದ ರಸ್ತೆ ಅಭಿವೃದ್ಧಿಗೆ ಪ್ರಥಮ ಹೆಜ್ಜೆ ಇಡಲಾಗಿದೆ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ನಗರದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ನಗರದ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಹಾಗೂ 2.5 ಕಿಲೋಮೀಟರ್ ರಸ್ತೆ ಡಾಂಬರಿಕರಣ ಕಾಮಗಾರಿಗೆ 2 ಕೋಟಿ 17 ಲಕ್ಷದ ಮೊತ್ತದ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅನೇಕ ಇಲಾಖೆಗಳ ಸಚಿವರಿಗೆ ಮನವಿ ಮಾಡಿಕೊಂಡಿದ್ದರ ಫಲವಾಗಿ ಕೆಲವೊಂದು ಕಾಮಗಾರಿಗಳಿಗೆ ಅನುಧಾನ ಮಂಜೂರಾತಿ ದೊರೆತ್ತಿದ್ದರು ಇನ್ನೂ ಹಂತ ಹಂತವಾಗಿ ಕಾಮಗಾರಿ ಕೈಕೊಳ್ಳಲಾಗುವುದು ಎಂದರು.
ಸಣ್ಣ ಕೈಗಾರಿಕಾ ಇಲಾಖೆಯ ಸಹಕಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ ಕಿತ್ತೂರ ಗುತ್ತಿಗೆದಾರ ಅಲಂಕಾರ, ಉದ್ಯಮಿದಾರಾದ ಗುರುಗೌಡ ಬಿರಾದಾರ, ತಮ್ಮಣ್ಣ ಇಳಗೇರ, ರವಿ ಗೋಲಾ, ಬಸವರಾಜ ಅಂಬಲಗಿ, ಸಂತೋಷ ಹರನಾಳ, ಶರಣು ಉಪ್ಪಿನ, ಶರಣು ಸಿಂದೇ, ರಫೀಕ್ ವಡಗೇರಿ, ಮೈಬುಬ ಹಸರಗುಂಡಗಿ, ಮನಸೂರ ಪಟೇಲ, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 