ಅಮೃತ 02 ಯೋಜನೆಯಡಿ ಅಂದಾಜು ಮೊತ್ತ ರೂ.23.39 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಭೂಮಿ ಪೂಜೆ
MLA Ashok Managuli performs Bhoomi Puja for the work estimated to cost Rs. 23.39 lakhs under the Am
ಸಿಂದಗಿ 07: ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿವಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳನ್ನು ಅಭಿವೃದ್ಧಿಗೆ ಹೆಚ್ಚಿನ ಪ್ರಾದಾನ್ಯತೆ ನೀಡಲಾಗುತ್ತಿದೆ. ಪಟ್ಟಣದ ಒಟ್ಟು 72 ಉದ್ಯಾನವನಗಳಿವೆ ಅವುಗಳಲ್ಲಿ 10-15 ಮಾತ್ರ ಅಭಿವೃದ್ಧಿ ಪಡಿಸಲಾಗಿದೆ ಇನ್ನೂಳಿದ ಉದ್ಯಾನವನಗಳು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಹಳೇ ಚಾಂದಕವಟೆ ರಸ್ತೆಯಲ್ಲಿರುವ ಮೊಹ್ಮದ ಇಮ್ತಿಯಾಜ ಲೇಓಟದಲ್ಲಿನ ಗಾರ್ಡನ ಅಭಿವೃದ್ದಿಗೆ ಅಮೃತ 02 ಯೋಜನೆಯಡಿ ಅಂದಾಜು ಮೊತ್ತ ರೂ.23.39 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿ, ಪಟ್ಟಣದ ಐಬಿ ಹಿಂದುಗಡೆಯಿರುವ ಸರಕಾರಿ ಉರ್ದು ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಸನ್ 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೂಮಿ ಪೂಜೆ ನೇರವೇರಿಸಲಾಗಿದೆ ಪಟ್ಟಣದ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಪಡಿಸಲು ಮುಂದಾಗಿದ್ದೇನೆ ಕಾರಣ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಪೂಜಾರಿ, ಎಂ.ಎ.ಖತೀಬ ಕಾಚೂರ ಸರ್, ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಬಸವರಾಜ ಕಾಂಬಳೆ, ಸದಸ್ಯರಾದ ಅಂಬರೀಷ ಚೌಗಲೇ, ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಭೂ ನ್ಯಾಯ ಮಂಡಳಿ ನಾಮ ನಿರ್ದೇಶನ ಸದಸ್ಯರಾದ ಭೀಮು ವಾಲಿಕಾರ, ರಜತ ತಾಂಬೆ, ಹಾಸೀಂ ಆಳಂದ, ರಾಜಣ್ಣಿ ನಾರಾಯಣಕರ, ರಾಜು ಖೇಡ ಸೇರಿದಂತೆ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 