ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ.ನಾಗರಾಜ ಭೂಮಿ ಪೂಜೆ
MLA B.M. Nagaraja performs Bhoomi Puja for road development work
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ.ನಾಗರಾಜ ಭೂಮಿ ಪೂಜೆ
ಕಂಪ್ಲಿ 09: ಮುಡಾ ಹಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಬಜೆಪಿಯವರು ತಮ್ಮ ಬೇಳೆ ಬೆಯ್ಯಿಸಿಕೊಳ್ಳಲು ಸಿಎಂ ಹೆಸರಿಗೆ ಕಳಂಕ ತರುವ ಹುನ್ನಾರದಿಂದ ಮುಡಾ ಹಗರಣ ಪ್ರಸ್ತಾಪಿಸುತ್ತಿದ್ದಾರೆ ಎಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ ಹೇಳಿದರು.
ತಾಲೂಕು ಸಮೀಪದ ಮಣ್ಣೂರು ಗ್ರಾಮದಲ್ಲಿ 2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಮಣ್ಣೂರು ಸೂಗೂರು ಗ್ರಾಮದ ಮುಖ್ಯರಸ್ತೆಯಿಂದ ಎಮ್ಮಿಗನೂರುವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕೇಂದ್ರ ಸರ್ಕಾರವು ಸಾಕಷ್ಟು ಬೆಲೆ ಏರಿಕೆಯೊಂದಿಗೆ ದೇಶದ ಜನರ ಬದುಕಿಗೆ ಕಣ್ಣೀರು ಎರಚಿದ್ದು, ಈಗ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಯೊಂದಿಗೆ ಸುಭದ್ರವಾಗಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ಬೆಲೆ ಏರಿಕೆ ಗೂಬೆ ಕೂರಿಸುವಂತಹ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸುಭದ್ರವಾಗಿ ಸರ್ಕಾರವನ್ನು ಮುನ್ನಡಿಸಲಿದ್ದಾರೆ. ಬರುವ ದಿನಗಳಲ್ಲಿ ಕೆಲ ಕ್ಷೇತ್ರಗಳು ವಿಂಗಡೆಯಾಗಲಿವೆ. ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಕರಿಯಪ್ಪ, ಗುತ್ತಿಗೆದಾರ ದಮ್ಮೂರು ಶ್ರೀನಿವಾಸ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 