ಶಾಸಕ ಗಣೇಶ ಇವರಿಂದ ವಾಲ್ಮೀಕಿ ಜಾತ್ರೆಗೆ ಒಂದು ಲೋಡ್ ಅಕ್ಕಿ ದೇಣಿಗೆ
MLA Ganesh donates a load of rice to Valmiki Fair
ಕಂಪ್ಲಿ 06: ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ ನಡೆಯುವ ಹಿನ್ನಲೆ ಶಾಸಕ ಜೆ.ಎನ್.ಗಣೇಶ ಇವರು ಅನ್ನದಾಸೋಹಕ್ಕಾಗಿ ಒಂದು ಲೋಡ್ ಅಕ್ಕಿಯನ್ನು ದೇಣಿಗೆಯಾಗಿ ಮಿನಿ ಲಾರಿಯ ಮೂಲಕ ಕಂಪ್ಲಿಯಿಂದ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಸಂಸ್ಥಾನ ಮಠಕ್ಕೆ ಶುಕ್ರವಾರ ಕಳುಹಿಸಿದರು.
ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಶಾಸಕ ಗಣೇಶ ಅವರ ನಿರ್ದೇಶನದ ಮೇರೆಗೆ ವಾಲ್ಮೀಕಿ ಸಮಾಜದ ಮುಖಂಡರು ಅಕ್ಕಿ ಲೋಡನ್ನು ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಹಾಲ್ಮೋರೋ ಈರಣ್ಣ, ಟ್ಯಾಕ್ಸಿ ಈರಣ್ಣ, ವಾಲ್ಮೀಕಿ ರಾಘವೇಂದ್ರ, ಫ್ಯಾಕ್ಟ್ರಿ ಶೇಖರ್, ಕೊಟ್ಟಾಲ್ ವಿರೇಶ ಹಾಗೂ ಸಮಾಜದ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 