ಪಂಡರಪುರ ದಿಂಡಿ ಪಾದಯಾತ್ರೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
MLA Lakshmi Hebbalkar drives for Pandarpur Dindi Padayatra
ಬೆಳಗಾವಿ 09: ಆಷಾಢ ಏಕಾದಶಿ ಅಂಗವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಗುರುವಾರ ಆಯೋಜಿಸಲಾದ ವಿಠಲ-ರಕುಮಾಯಿ ಪಂಡರಪುರ ದಿಂಡಿ ಪಾದಯಾತ್ರೆಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿ, ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಶುಭಾಶಯ ಕೋರಿದರು.
ವಿಠ್ಠಲ ಮತ್ತು ರುಕ್ಮಾಯಿ ದೇವಿಯ ಭಜನೆ, ನಾಮಸ್ಮರಣೆ ಹಾಗೂ ಭಕ್ತಿಗೀತೆಗಳ ನಡುವೆ ಆರಂಭವಾದ ಪಾದಯಾತ್ರೆಯಲ್ಲಿ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಸಂಪ್ರದಾಯಬದ್ಧ ವೇಷಭೂಷಣ ಧರಿಸಿದ್ದ ವಾರ್ಕರಿ ಭಕ್ತರು "ವಿಠ್ಠಲ ವಿಠ್ಠಲ" ಎಂಬ ನಾಮಘೋಷದೊಂದಿಗೆ ಸಾಗಿದ ದೃಶ್ಯ ಗಮನ ಸೆಳೆಯಿತು.
ಲಕ್ಷ್ಮೀ ಹೆಬ್ಬಾಳಕರ್, ಆಷಾಢ ಏಕಾದಶಿಯು ಭಕ್ತಿ, ಶ್ರದ್ಧೆ ಮತ್ತು ಆಧ್ಯಾತ್ಮಿಕತೆಯ ಪ್ರತೀಕವಾಗಿದ್ದು, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ, ಮಾನವೀಯ ಮೌಲ್ಯಗಳು ಹಾಗೂ ಏಕತೆಯ ಸಂದೇಶವನ್ನು ಸಾರುತ್ತವೆ ಎಂದು ಹೇಳಿದರು. ಪಂಡರಪುರ ದಿಂಡಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಭಕ್ತರಿಗೆ ವಿಠ್ಠಲನ ಆಶೀರ್ವಾದ ಸದಾ ಇರಲಿ ಎಂದು ಅವರು ಹಾರೈಸಿದರು.
ಸಾಂಬ್ರಾ ಗ್ರಾಮದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತಿಭಾವದಿಂದ ನಡೆಯುತ್ತಿರುವ ಈ ದಿಂಡಿ ಪಾದಯಾತ್ರೆಯು ಸ್ಥಳೀಯರ ಧಾರ್ಮಿಕ ಸಂಪ್ರದಾಯದ ಪ್ರತೀಕವಾಗಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪಕ್ಷದ ಮುಖಂಡರಾದ ನಾಗೇಶ್ ದೇಸಾಯಿ, ಮನೋಹರ್ ಬೆಳಗಾಂವ್ಕರ್, ವಾರ್ಕರಿ ಸಂತರು, ಗ್ರಾಮಸ್ಥರು, ಭಕ್ತಾದಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 