ನೇತಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ :ಶಾಸಕ ಮಾನೆ,
MLA Mane pays floral tribute to Netaji's portrait
ಹಾನಗಲ್ 23 :ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ನೇತಾಜಿ ಸುಭಾಸ್ಚಂದ್ರ ಬೋಸ್ ಜಯಂತಿ ಆಚರಿಸಲಾಯಿತು. ನೇತಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಶಾಸಕ ಶ್ರೀನಿವಾಸ ಮಾನೆ, ನನಗೆ ರಕ್ತ ಕೊಡಿ, ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂಬ ಘೋಷಣೆ ಮೊಳಗಿಸಿದ್ದ ನೇತಾಜಿ ಸುಭಾಸ್ಚಂದ್ರ ಬೋಸ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.
ಯುವ ಸಮೂಹವನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ತುಂಬಿದ್ದರು. ದೇಶಪ್ರೇಮ ಎಂದರೆ ಕೇವಲ ಮಾತಲ್ಲ, ಅದನ್ನು ಕಾರ್ಯರೂಪದಲ್ಲಿ ತೋರಿಸಬೇಕು ಎಂದು ಬಲವಾಗಿ ನಂಬಿದ್ದರು. ನೇತಾಜಿ ಜೀವನ ನಮಗೆ ಧೈರ್ಯ, ತ್ಯಾಗ ಮತ್ತು ರಾಷ್ಟ್ರಸೇವೆಯ ಪಾಠ ಕಲಿಸುತ್ತದೆ. ಅವರ ಆದರ್ಶಗಳು ಇಂದಿನ ಯುವಕರಿಗೆ ದಾರೀದೀಪವಾಗಿವೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ತಾಪಂ ಕೆಡಿಪಿ ಸದಸ್ಯ ರಾಜಕುಮಾರ ಜೋಗಪ್ಪನವರ, ಮುಖಂಡರಾದ ಈರಣ್ಣ ಬೈಲವಾಳ, ಎಂ.ಎಂ.ನೆಗಳೂರ, ರವಿ ಜಾಧವ, ರಾಜಕುಮಾರ ಶಿರಪಂಥಿ ನಾಗರಾಜ ಬಕ್ಕಣ್ಣನವರ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 