ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ನಾಡಗೌಡ
MLA Nadagowda distributes three-wheelers to the disabled
ತಾಳೆಕೋಟಿ 24: ತಾಲೂಕು ಪಂಚಾಯತ್ ವತಿಯಿಂದ ವಿಕಲಚೇತನರಿಗೆ 2024 ನೇ ಸಾಲಿನ ಅನುದಾನದ ಮೂರು ತ್ರಿಚಕ್ರ ವಾಹನಗಳನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಫಲಾನುಭವಿಗಳಿಗೆ ಮಂಗಳವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತು ತಾಲೂಕ ಪಂಚಾಯತ್ ವತಿಯಿಂದ 2024ನೇ ಸಾಲಿನ ಅನುದಾನದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಮೂರು ತ್ರಿಚಕ್ರ ವಾಹನಗಳ ಪೈಕಿ ವುಳಿದ ವಾಹನಗಳನ್ನು ವಿತರಿಸಿದ್ದೇನೆ ಇದರ ಸದ್ಬಳಕೆಯನ್ನು ಅವರು ಮಾಡಿಕೊಳ್ಳಬೇಕೆಂದು ತಿಳಿಸುತ್ತೇನೆ ಎಂದರು.ಈ ಸಮಯದಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ತಾಪಂ ಇಓ ಅನುಸೂಯಾ ಚಲವಾದಿ, ಮುಖಂಡರಾದ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಸಂಗಮೇಶ ದೇಸಾಯಿ, ರೋಷನ್ ಡೋಣಿ, ಸಂಗನಗೌಡ ಅಸ್ಕಿ, ಆರೀಫ ಕೆಂಭಾವಿ, ತಾಪಂನ ಬಸನಗೌಡ ಚೌಧರಿ, ಮಹಾಂತಗೌಡ ದೊರೇಗೋಳ ಹಾಗೂ ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 