ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ನಾಡಗೌಡ
MLA Nadagowda distributes three-wheelers to the disabled
ತಾಳೆಕೋಟಿ 24: ತಾಲೂಕು ಪಂಚಾಯತ್ ವತಿಯಿಂದ ವಿಕಲಚೇತನರಿಗೆ 2024 ನೇ ಸಾಲಿನ ಅನುದಾನದ ಮೂರು ತ್ರಿಚಕ್ರ ವಾಹನಗಳನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡರು ಫಲಾನುಭವಿಗಳಿಗೆ ಮಂಗಳವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತು ತಾಲೂಕ ಪಂಚಾಯತ್ ವತಿಯಿಂದ 2024ನೇ ಸಾಲಿನ ಅನುದಾನದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಮೂರು ತ್ರಿಚಕ್ರ ವಾಹನಗಳ ಪೈಕಿ ವುಳಿದ ವಾಹನಗಳನ್ನು ವಿತರಿಸಿದ್ದೇನೆ ಇದರ ಸದ್ಬಳಕೆಯನ್ನು ಅವರು ಮಾಡಿಕೊಳ್ಳಬೇಕೆಂದು ತಿಳಿಸುತ್ತೇನೆ ಎಂದರು.ಈ ಸಮಯದಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ತಾಪಂ ಇಓ ಅನುಸೂಯಾ ಚಲವಾದಿ, ಮುಖಂಡರಾದ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಸಂಗಮೇಶ ದೇಸಾಯಿ, ರೋಷನ್ ಡೋಣಿ, ಸಂಗನಗೌಡ ಅಸ್ಕಿ, ಆರೀಫ ಕೆಂಭಾವಿ, ತಾಪಂನ ಬಸನಗೌಡ ಚೌಧರಿ, ಮಹಾಂತಗೌಡ ದೊರೇಗೋಳ ಹಾಗೂ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 