ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ
MLA Raju Gowda distributed a new vehicle to the police
ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ
ದೇವರಹಿಪ್ಪರಗಿ 12: ಶಾಸಕರ ಅನುದಾನದಲ್ಲಿ ಪಟ್ಟಣದ ಪೊಲೀಸ್ ಠಾಣೆಗೆ ನೂತನ ಬೊಲೆರೋ ವಾಹನವನ್ನು ಪಿಎಸ್ಐ ಬಸವರಾಜ ತಿಪ್ಪರಡ್ಡಿ ಅವರಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ವಿತರಿಸಿದರು.ಪಟ್ಟಣದ ಪ್ರವಾಸಿ ಮಂದಿರದ ಬಳಿ ಬುದುವಾರದಂದು ವಾಹನ ವಿತರಣೆ ಮಾಡಿ ಮಾತನಾಡಿದ ಅವರು, ಪೊಲೀಸ್ ಠಾಣೆಗೆ ವಾಹನಗಳ ಅವಶ್ಯಕತೆ ಇದೆ, ಪಟ್ಟಣದ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಾರಣ ವಾಹನಗಳ ದಟ್ಟಣೆಯನ್ನು ನಿಭಾಯಿಸಲು ಹಾಗೂ ಪೊಲೀಸ್ ಠಾಣೆ ಹೆಚ್ಚು ಜನಸ್ನೇಹಿಯಾಗಲು ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಜಿ.ಪಂ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಶೀಲ್ದಾರ್ ಪ್ರಕಾಶ ಸಿಂದಗಿ, ತಾ.ಪಂ ಇಒ ಭಾರತಿ ಚೆಲುವಯ್ಯ,ಪ.ಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 