ಬಸವೇಶ್ವರ ಏತ ನೀರಾವರಿ ಕಾಮಗಾರಿ ಪೂರ್ಣಗೊಸಲು ಅನುದಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ರಾಜು ಕಾಗೆ ಮನವಿ
MLA Raju Kage appeals to Chief Minister Siddaramaiah to provide funds to complete the Basaveshwara
ಲೋಕದರ್ಶನ ವರದಿ
ಬಸವೇಶ್ವರ ಏತ ನೀರಾವರಿ ಕಾಮಗಾರಿ ಪೂರ್ಣಗೊಸಲು ಅನುದಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ರಾಜು ಕಾಗೆ ಮನವಿ
ಸಂಬರಗಿ 25: ಗಡಿ ಗ್ರಾಮದ ರೈತರ ಕನಸಾಗಿರುವ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಸಲು ಅನುದಾನ ನೀಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ರಾಜು ಕಾಗೆ ಮನವಿ ಮಾಡಿಕೊಂಡರು. ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಉದ್ಘಾಟಿಸಲು ಕಾಮಗಾರಿ ಭರದಿಂದ ನಡೆಯುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ಭರವಸೆಯ ಪ್ರಕಾರ ಗಡಿ ಭಾಗದ ಬರಗಾಲ ಪೀಡಿತ 30 ಗ್ರಾಮಗಳಲ್ಲಿ ನೀರಾವರಿ ಯೋಜನೆ ಹಾಗೂ ಕೆರೆ ತುಂಬುವ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗ ಹಸಿರು ಕ್ರಾಂತಿಯಾಗಿ ಬರಗಾಲ ಮುಕ್ತವಾಗುತ್ತದೆ. ಈ ಕಾಮಗಾರಿ ಕಾಂಗ್ರೆಸ್ ಸರಕಾರ ಚಾಲನೆ ನೀಡಿದೆ. ಆದರೆ ಪೂರ್ಣಗೊಂಡ ನಂತರ ಕಾಂಗ್ರೆಸ್ ಪಕ್ಷ ಉದ್ಘಾಟನೆ ಮಾಡುತ್ತದೆ. ಹೇಳಿದಂತೆ ನಡೆದಿರುವ ಸರಕಾರ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವದಿಲ್ಲ. ಒಂದನೇ ಹಂತದ ಕಾಮಗಾರಿ ಪೂರ್ಣಗೊಂಡು ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಿದೆ.
ನೀರಾವರಿ ಯೋಜನೆ ಪೂರ್ಣಗೊಂಡ ನಂತರ ಮುಂಬರುವ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಭಾರಿ ಮತದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯವಿದೆ. ಕಾರಣ ಈ ಯೋಜನೆ ಪೂರ್ಣಗೊಂಡ ನಂತರ ಕ್ಷೇತ್ರದ ಜನರ ವಿಶ್ವಾಸಕ್ಕೆ ಪಾತ್ರರಾಗುತ್ತೇವೆ. ಗಡಿ ಭಾಗದ ಬರಗಾಲ ಹಣೆಪಟ್ಟಿ ತೆಗೆದು ಹಾಕಲು ಸಾಧ್ಯವಾಗುತ್ತದೆ ಎಂದು ರಾಜು ಕಾಗೆ ತಿಳಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 