ಮಹಿಳಾ ದಿನಾಚರಣೆಯಂದು ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದ ಶಾಸಕ ರಾಜು ಕಾಗೆ
MLA Raju Kage distributed two-wheelers to the disabled on Women's Day
ಮಹಿಳಾ ದಿನಾಚರಣೆಯಂದು ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದ ಶಾಸಕ ರಾಜು ಕಾಗೆ
ಕಾಗವಾಡ, 08; ಶಾಸಕರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅವರು ಮಹಿಳಾ ದಿನಾಚರಣೆ ದಿನ ಶನಿವಾರ ದಿ. 08 ರಂದು ಕ್ಷೇತ್ರದ 18 ಜನ ವಿಕಲಚೇತನರಿಗೆ ಮಂಜೂರಾದ ದ್ವಿಚಕ್ರ ವಾಹನ ವಿತರಣೆ ಮಾಡಿದರು. ಬೆಳಗಾವಿಯಲ್ಲಿ ಇತ್ತಿಚಿಗೆ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ರಾಜು ಕಾಗೆ ಅವರು ತಮ್ಮ ಕ್ಷೇತ್ರದ ವಿಕಲಚೇತನರಿಗೆ ದ್ವಿಚಕ್ರ ವಾಹನ ನೀಡಲು ಶಿಪಾರಸ್ಸು ಮಾಡಿದ್ದರು. ಈಗ ಬೆಳಗಾವಿ ಜಿಲ್ಲೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ ಬೆಳಗಾವಿ ಇವರಿಂದ ಕ್ಷೇತ್ರದ ಒಟ್ಟು 18 ಜನ ವಿಕಲಚೇನರಿಗೆ ತಲಾ ರೂ. 1.40 ಲಕ್ಷ ಅನುದಾನದ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಉಗಾರ ಖುರ್ದದ ತಮ್ಮ ಗೃಹ ಕಚೇರಿಯಲ್ಲಿ ಶಾಸಕರು ವಾಹನದ ಕೀ ಹಸ್ತಾಂತರಿಸಿ, ವಿತರಿಸಿದರು. ಈ ಸಮಯದಲ್ಲಿ ತಾ.ಪಂ. ಎಓ ವೀರಣ್ಣಾ ವಾಲಿ ಮಾತನಾಡಿ, ಫಲಾನುಭವಿಗಳು ಈ ದ್ವೀಚಕ್ರ ವಾಹನದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ಸಮಯದಲ್ಲಿ ಸಿಡಿಪಿಓ ಸಂಜೀವಕುಮಾರ ಸದಲಗಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವಿಶ್ವನಾಥ ಮೋರೆ, ಮುಖಂಡ ವಸಂತ ಖೋತ, ಕೃಷ್ಣಾ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶಂಕರ ವಾಘಮೋಡೆ, ಅರಳಿಹಟ್ಟಿ ಗ್ರಾ.ಪಂ. ಅಧ್ಯಕ್ಷ ಬಸನಗೌಡಾ ಪಾಟೀಲ (ಬೊಮ್ಮನಾಳ), ರಾಜು ಮದನೆ, ಸಂಜು ಸಲಗರೆ ಸೇರಿದಂತೆ ಮುಖಂಡರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 