ತೊಗರಿ ಕೇಂದ್ರಕ್ಕೆ ಶಾಸಕ ರಾಜುಗೌಡ ಪಾಟೀಲ ಚಾಲನೆ
MLA Rajugowda Patil drives to Togari Centre
ತಾಳಿಕೋಟಿ 21: ತಾಲೂಕಿನ ಅಸ್ಕಿ ಗ್ರಾಮದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸ್ಥಾಪಿಸಲಾದ ತೊಗರಿ ಖರೀದಿ ಕೇಂದ್ರಕ್ಕೆ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ) ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಒಕ್ಕಲುತನ ಹುಟ್ಟುವಳಿಗಳಿಗೆ ಮಾರುಕಟ್ಟೆಯಲ್ಲಿ ಬೆಲೆಕುಸಿದಾಗ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯಾದರೂ ದೊರಕಿಸಿ ಕೊಡಬೇಕೆಂಬ ಉದ್ದೇಶದಿಂದ ಸರ್ಕಾರ ಜಾರಿ ಮಾಡಿದ ಸದರಿ ಯೋಜನೆಯ ಪ್ರಯೋಜನವನ್ನು ನಮ್ಮ ರೈತರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಅಸ್ಕಿ ಪಿಕೆಪಿಎಸ್ ಅಧ್ಯಕ್ಷ ಮಡಿವಾಳಪ್ಪ ಕೆ.ಚೌದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲಗೆ ಸಂಘದ ವತಿಯಿಂದ ಸನ್ಮಾನಿಸಿ ಗೌರಿಸಲಾಯಿತು. ಈ ಸಮಯದಲ್ಲಿ ಪಿಕೆಪಿಎಸ್ ಉಪಾಧ್ಯಕ್ಷ ಶಂಕ್ರ್ಪ ಕೆಳಗಿನಮನಿ, ಮುಖಂಡ ಎಸ್.ಎಸ್.ಪಾಟೀಲ, ಅಸ್ಕಿ ಮಾಜಿ ಗ್ರಾಪಂ ಅಧ್ಯಕ್ಷ ರಾಯಪ್ಪಗೌಡ ಪಾಟೀಲ, ಪಿಕೆಪಿಎಸ್ ಸದಸ್ಯರಾದ ಹಣಮಗೌಡ ಬಿರಾದಾರ,ಮಲ್ಲನಗೌಡ ಕರಿಗೌಡರ, ವಿಶ್ವನಾಥರೆಡ್ಡಿ ಬಿರಾದಾರ, ಶಿವರುದ್ರ್ಪ ಮಗದಾಳ, ಬಸವರಾಜ ಬ್ಯಾಕೋಡ, ರುದ್ರಗೌಡ ಸಿ.ಬಿರಾದಾರ, ಎಂ.ಬಿ. ಕೊಣ್ಣೂರ, ಹೇಮಾ ಬಿ.ಯಾಳಗಿ ನಾಗಮ್ಮ ಎನ್.ಬಿರಾದಾರ, ಸಿದ್ದರಾಮಪ್ಪ ವಡಗೇರಿ,ಈರಘಂಟೆಪ್ಪ ದೊಡ್ಡಮನಿ,ಸಿಇಓ ಎಂ.ಎಂ.ತಳವಾರ ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 