ಡೋಣಿ ನದಿ ಪ್ರವಾಹ ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ, ಪರೀಶೀಲನೆ.
MLA Rajugowda visits and inspects the Doni River flood site.
ಡೋಣಿ ನದಿ ಪ್ರವಾಹ ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ, ಪರೀಶೀಲನೆ.
ದೇವರಹಿಪ್ಪರಗಿ, 08 : ಡೋಣಿ ನದಿ ಪ್ರವಾಹದಿಂದಾಗಿ ಸಂತ್ರಸ್ತವಾದ ಗ್ರಾಮಗಳು ಮತ್ತು ರೈತರ ಜಮೀನುಗಳಿಗೆ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಮತಕ್ಷೇತ್ರದ ನಾನಾ ಕಡೆ ಶುಕ್ರವಾರದಂದು ಭೇಟಿ ನೀಡಿ ಪರೀಶೀಲನೆ ನಡೆಸಿದ ಅವರು, ಸುರಕ್ಷಾ ಕ್ರಮಗಳನ್ನು ಹಾಗೂ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಪ್ರಕಾಶ ಸಿಂದಗಿ ಹಾಗೂ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದ್ದಾರೆ.
ಡೋಣಿ ನದಿ ತೀರದ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಕೊಚ್ಚಿಕೊಂಡು ಹೋಗಿವೆ ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಜಂಟಿ ಸರ್ವೆ ಕಾರ್ಯ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಲು ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ, ಮುಖಂಡರುಗಳಾದ ಸಿದ್ದನಗೌಡ ಜಲಪೂರ, ನಾಗೇಶ ಅವಟಿ, ಕಾಸು ಸಾಸಟ್ಟಿ, ಮಶಾಕ್ ಕನ್ನೊಳ್ಳಿ, ವಿಶ್ವನಾಥ ಅವಟಿ, ಪ್ರಕಾಶ ಗುಡಿಮನಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 