ಸಿದ್ಧೇಶ್ವರ ದೇವಸ್ಥಾನ ಸಮುದಾಯ ಭವನಕ್ಕೆ ಶಾಸಕ ಸವದಿ ಭೂಮಿ ಪೂಜೆ
MLA Savadi Bhoomi Puja at Siddheshwar Temple Community Hall
ಅಥಣಿ, 07 : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಲುಮತ ಸಮುದಾಯಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಸ್ಥಳೀಯ ದಡ್ಡಿ ಸಿದ್ಧೇಶ್ವರ ದೇವಸ್ಥಾನದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಬಿಡುಗಡೆಯಾದ 50 ಲಕ್ಷ ಅನುದಾನದ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಹಾಲು ಮತ ಸಮಾಜ ಬಾಂಧವರು ಸರಕಾರದ ಈ ಯೋಜನೆಯನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಮತ್ತು ಈ ಸಮುದಾಯ ಭವನ ಸಮಾಜದ ಸಾಂಸ್ಕೃತಿಕ ವೇದಿಕೆಯಾಗಬೇಕು ಎಂದ ಅವರು ಮಕ್ಕಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂದು ಕಿವಿ ಮಾತು ಹೇಳಿದರು.ಇದೇ ಸಂದರ್ಭದಲ್ಲಿ ಶಾಸಕ ಲಕ್ಷ್ಮಣ ಸವದಿಯವರನ್ನು ದಡ್ಡಿ ಸಿದ್ಧೇಶ್ವರ ದೇವಸ್ಥಾನ ಕಮೀಟಿ ಮತ್ತು ಹಾಲುಮತ ಸಮಾಜ ಬಾಂಧವರ ವತಿಯಿಂದ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಹಾಲುಮತ ಸಮಾಜದ ಆನಂದ ಮಾಕಾಣಿ, ಕಲ್ಲಪ್ಪ ಮೇತ್ರಿ, ಲಕ್ಕಪ್ಪ ಯಂಕಚ್ಚಿ, ವಿಠ್ಠಲ್ ತಟ್ರಿ, ಶಿವರುದ್ರ ಘೂಳಪ್ಪನವರ, ಸುರೇಶ ಇಜೇರಿ, ಹಣಮಂತ ಮಾಕಾಣಿ, ಕೃಷ್ಣಾ ಲಂಗೋಟಿ, ಶ್ರೀಶೈಲ ಶೆಲ್ಲೆಪ್ಪಗೋಳ, ನಿಂಗಪ್ಪಾ ಐನಾಪುರೆ, ಮಹಾದೇವ ಬಿಳಿಕುರೆ, ಆನಂದ ಲಂಗೋಟಿ, ಬೀರ್ಪ ಯಕ್ಕಂಚಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 