ಶಾಸಕಿ ರೂಪಾಲಿಗೆ ನಮಿಸಿದ ಶಾಸಕ ಶಿವರಾಂ ಹೆಬ್ಬಾರ
ಶಾಸಕಿ ರೂಪಾಲಿಗೆ ನಮಿಸಿದ ಶಾಸಕ ಶಿವರಾಂ ಹೆಬ್ಬಾರ
ಕಾರವಾರ: ಯಲ್ಲಾಪುರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯಥರ್ಿ ಶಿವರಾಮ ಹೆಬ್ಬಾರ್ ಪರ ಕೆಲಸ ಮಾಡಿ, ಪಕ್ಷ ನೀಡಿದ ಕೆಲಸ ಯಶಸ್ವಿಯಾಗಿ ನಿಭಾಯಿಸಿದ ಕಾರವಾರ ಶಾಸಕಿ ರೂಪಾಲಿ ನಾಯ್ಕಗೆ ನೂತನ ಶಾಸಕ ಶಿವರಾಮ ಹೆಬ್ಬಾರರು ಫಲಿತಾಂಶ ಬರುತ್ತಿದ್ದಂತೆ ಕೃತಜ್ಞತೆ ಅಪರ್ಿಸಿದರು.
ಗೆಲುವಿಗೆ ಯಲ್ಲಾಪುರದಲ್ಲಿ ನೆಲೆ ನಿಂತು ಕಾರ್ನರ್ ಮೀಟಿಂಗ್ ಹಾಗೂ ಮನೆ ಮನೆ ಭೇಟಿ ಮಾಡಿ ಮತಯಾಚಿಸಿದ ನಿಮಿತ್ತ ಶಾಸಕಿ ರೂಪಾಲಿ ಅವರಿಗೆ ನಮಸ್ಕರಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ ಅವರು ಹೆಬ್ಬಾರರು ಅಭೂತಪೂರ್ವ ದಾಖಲೆಯ ಗೆಲುವನ್ನು ಸಾಧಿಸಿರುತ್ತಾರೆ ಎಂದು ನಮಗೆ ಗೊತ್ತಿತ್ತು. ಮತದಾರರಿಗೆ ಯಡಿಯೂರಪ್ಪ ಸಕರ್ಾರದ ಸ್ಥಿರತೆ ಇದ್ದರೆ, ಅಭಿವೃದ್ಧಿ ಸಾಧ್ಯ ಎಂದು ಮತದಾರರಿಗೆ ಮನವರಿಕೆ ಮಾಡಿದ್ದೆವು ಎಂದರು. ಯಲ್ಲಾಪುರ ಉಪಚುನಾವಣೆಯ ನಗರ ಉಸ್ತುವಾರಿಯನ್ನು ನನಗೆ ಪಕ್ಷ ನೀಡಿತ್ತು. ಅದನ್ನು ನಿರ್ವಹಿಸಿದ್ದೇವೆ ಎಂದರು. ಯಲ್ಲಾಪುರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿಯೂ ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 