ಅಕ್ಕಿಆಲೂರಿನಲ್ಲಿ ರಕ್ತದಾನ ಮಾಡಿದ ಶಾಸಕ ಶ್ರೀನಿವಾಸ ಮಾನೆ
MLA Srinivas Mane donates blood in Akki Alur
ಅಕ್ಕಿಆಲೂರಿನಲ್ಲಿ ರಕ್ತದಾನ ಮಾಡಿದ ಶಾಸಕ ಶ್ರೀನಿವಾಸ ಮಾನೆ
ಹಾನಗಲ್ 07 : ಶಾಸಕ ಶ್ರೀನಿವಾಸ ಮಾನೆ ಅವರ 51 ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್ ಮತ್ತು ಅಕ್ಕಿಆಲೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಗಳಲ್ಲಿ ಒಟ್ಟು 233 ಜನ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ರಕ್ತದಾನ ಶಿಬಿರಗಳಲ್ಲಿ ಅತೀ ಹೆಚ್ಚು ಯುನಿಟ್ ರಕ್ತ ಸಂಗ್ರಹ ಮಾಡಿದ್ದು ದಾಖಲೆಯಾಯಿತು.
ಹುಬ್ಬಳ್ಳಿಯ ಕಿಮ್ಸ್ ರಕ್ತ ಭಂಡಾರದ ಮುಖ್ಯಸ್ಥೆ ಡಾ.ಕವಿತಾ, ಹಾವೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಬಸವರಾಜ ಮಾತನಾಡಿ, ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆ ನೀಗಿಸಲು ಪ್ರತಿಯೊಬ್ಬ ಆರೋಗ್ಯವಂತರೂ ಸಹ ರಕ್ತದಾನ ಮಾಡಬೇಕಿದೆ. ವಿಜ್ಞಾನ ಎಷ್ಟೇ ಮುಂದುವರೆದಿದ್ದರೂ ಕೂಡ ರಕ್ತ ಉತ್ಪಾದನೆ ಮಾಡುವುದು ಅಸಾಧ್ಯ. ಒಬ್ಬರು ರಕ್ತದಾನ ಮಾಡುವ ಮೂಲಕವೇ ಜೀವದಾನ ಮಾಡಬೇಕಿದೆ. ಹಾಗಾಗಿ ಸಮುದಾಯದಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದ ಅವರು ಶಾಸಕ ಶ್ರೀನಿವಾಸ ಮಾನೆ ಅವರ ಜನ್ಮದಿನದ ಪ್ರಯುಕ್ತ ನಡೆದ ಎರಡೂ ಶಿಬಿರಗಳ ಮೂಲಕ 233 ಯುನಿಟ್ ರಕ್ತ ಸಂಗ್ರಹಿಸಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಶಿಬಿರಗಳ ಪೈಕಿ ಅತೀ ಹೆಚ್ಚು ಯುನಿಟ್ ಸಂಗ್ರಹಿಸಲಾಗಿರುವುದು ವಿಶೇಷ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 