ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
MLA Srinivas Mane performs Bhoomi Pooja for various development works
ಹಾನಗಲ್ 21: ತಾಲೂಕಿನ ಸುರಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರಳೇಶ್ವರ ಮತ್ತು ಕುಂಟನ ಹೊಸಳ್ಳಿ ಗ್ರಾಮಗಳಲ್ಲಿ 2024-25 ನೇ ಸಾಲಿನ ಹಾಗೂ 2025-26 ನೇ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಒಟ್ಟು ? 55 ಲಕ್ಷ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ರಸ್ತೆ ಅಭಿವೃದ್ಧಿ, ಸಿಸಿರಸ್ತೆ, ಸಿಡಿ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಗ್ರಾಮಸ್ಥರ ಕುಂದು, ಕೊರತೆ ಸಹ ಆಲಿಸಿದ ಶಾಸಕ ಮಾನೆ, ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಒಂದು ಕಡೆ ಕುಳಿತು ಹಂಚಿಕೆ ಮಾಡದೇ ಪ್ರತಿಯೊಂದು ಗ್ರಾಮಗಳಿಗೂ ಸಹ ಭೇಟಿ ನೀಡಿ ಗ್ರಾಮಸ್ಥರ ಬೇಡಿಕೆಗೆ ಅನುಸಾರವಾಗಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಒಂದು ಕೋಟಿ ರೂ.ವರೆಗೆ ಅನುದಾನ ಹಂಚಿಕೆ ಮಾಡಲಾಗಿದೆ. ಪ್ರಮುಖವಾಗಿ ರಸ್ತೆ ಅಭಿವೃದ್ಧಿ, ಸಿಸಿರಸ್ತೆ, ಸಿಡಿ ನಿರ್ಮಾಣದಂತ ಪ್ರಮುಖ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಯಂಕವ್ವ ಬಂಡಿವಡ್ಡರ, ಉಪಾಧ್ಯಕ್ಷ ನಾಗರಾಜ ತಳಗೇರಿ, ಸದಸ್ಯ ರೆಹೆಮತ್ ನೆಲ್ಲಿಕೊಪ್ಪ, ಜಿಪಂ ಮಾಜಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಜಗದೀಶ ವಾಲ್ಮೀಕಿ, ಖಾಸೀಂಸಾಬ ಸಾವಿಕೇರಿ, ಬಸವರಾಜ ಹಾನಗಲ್, ಅಶೋಕ ಸುಭಾನಜಿ, ಅಬ್ದುಲಖಾದರ ಶಿರಗೋಡ, ಪರಸಪ್ಪ ನಾಯ್ಕ, ಬಸವರಾಜ ಮೈಲಾರದ, ಹನುಮಂತಪ್ಪ ನಾಯಕ, ಪರಸಪ್ಪ ನಾಯಕ, ಬಸನಗೌಡ ದೊಡ್ಡಗೌಡ್ರ, ಖಾದರಸಾಬ ಮಲ್ಲಿಗಾರ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 