ಜನ್ಮದಿನ ಆಚರಿಸಿಕೊಳ್ಳದಿರಲು ಶಾಸಕ ಸುನೀಲಗೌಡ ಪಾಟೀಲ ನಿರ್ಧಾರ

ಜನ್ಮದಿನ ಆಚರಿಸಿಕೊಳ್ಳದಿರಲು ಶಾಸಕ ಸುನೀಲಗೌಡ ಪಾಟೀಲ ನಿರ್ಧಾರ MLA Sunil Gowda Patil decides not to celebrate his birthday

ಜನ್ಮದಿನ ಆಚರಿಸಿಕೊಳ್ಳದಿರಲು ಶಾಸಕ ಸುನೀಲಗೌಡ ಪಾಟೀಲ ನಿರ್ಧಾರ 

ವಿಜಯಪುರ 27: ಅತೀವಷ್ಠಿ ಮತ್ತು ಪ್ರವಾಹದಿಂದಾಗಿ ಅನ್ನದಾತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ಬಾರಿ ಅ. 31 ರಂದು ಶುಕ್ರವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಅತೀವೃಷ್ಠಿ ಮತ್ತು ಪ್ರವಾಹದಿಂದಾಗಿ ರೈತಾಪಿ ಜನರು ಸಂಕಷ್ಟದಲ್ಲಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆ ಮತ್ತು ಪ್ರವಾಹದಿಂದಾಗಿ ಹಲವಾರು ಗ್ರಾಮಗಳಲ್ಲಿ ಸಮಸ್ಯೆಗಳಾಗಿವೆ.  ಆಸ್ತಿ-ಪಾಸ್ತಿ ಮತ್ತು ಬೆಳೆಯೂ ಹಾನಿಯಾಗಿದೆ.  ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನ್ಮದಿನ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ.  ಹೀಗಾಗಿ ಇದೇ ಅಕ್ಟೋಬರ್ 31 ರಂದು ಶುಕ್ರವಾರ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ.  ಬೆಂಬಲಿಗರು, ಅಭಿಮಾನಿಗಳು, ಹಿತೈಸಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಸುನೀಲಗೌಡ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.