ಸಿಡಿಲು ಬಡಿದು ಮೃತಪಟ್ಟ ಬಾಲಪ್ಪ ಕಳಸದ ಕುಟುಂಬಕ್ಕೆ ಶಾಸಕ ಯಾದವಾಡ ಸಾಂತ್ವನ
ರಾಮದುರ್ಗ 20: ಸೋಮವಾರ ಸಿಡಿಲು ಬಡಿದು ಮೃತಪಟ್ಟ ತಾಲೂಕಿನ ಚಿಕ್ಕೊಪ್ಪ ಎಸ್.ಕೆ ಗ್ರಾಮದ ಬಾಲಪ್ಪ ನಾಗಪ್ಪ ಕಳಸದ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಶಾಸಕ ಮಹಾದೇವಪ್ಪ ಯಾದವಾಡ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಪ್ರಕೃತಿಯಲ್ಲಿ ನಡೆಯುವ ವೈಪರಿತ್ಯದಿಂದಾಗುವ ಅವಘಡಕ್ಕೆ ಸರಕಾರದಿಂದ ಸುಮಾರು 4 ಲಕ್ಷ ಜಿಲ್ಲಾಧಿಕಾರಿಗಳ ನಿಧಿಯಿಂದ 1 ಲಕ್ಷ ಸೇರಿದಂತೆ ಒಟ್ಟು ರೂ. 5 ಲಕ್ಷ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ ಅವರು, ಮದುವೆಯಾಗದ ಯುವಕ ಬಲಿಯಾಗಿದ್ದು ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಮೃತನ ಕುಟುಂಬಕ್ಕೆ ತಲುಪಿಸುವಲ್ಲಿ ಅಧಿಕಾರಿಗಳು ಗಮನ ಹರಿಸಬೇಕು. ಪರಿಹಾರದಿಂದ ಬಂದ ಹಣವನ್ನು ಮೃತನ ತಾಯಿಯ ಭವಿಷ್ಯತ್ತಿನ ದೃಷ್ಠಿಯಿಂದ ಉಪಯುಕ್ತವಾಗುವ ನಿಟ್ಟಿನಲ್ಲಿ ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಗ್ರೇಡ್-2 ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಸಹಾಯಕ ಕೃಷಿ ನಿದರ್ೇಶಕ ಎಸ್.ಎಫ್. ಬೆಳವಟಗಿ, ಜಿ.ಪಂ ಸದಸ್ಯೆ ಶಿವಕ್ಕ ಬೆಳವಡಿ, ಎಪಿಎಂಸಿ ಸದಸ್ಯ ದ್ಯಾವಪ್ಪ ಬೆಳವಡಿ, ಬಾಬು ವಾಲಿ, ಮಹಾದೇವ ಲಕ್ಕನ್ನವರ, ರವಿ ಅಜ್ಜಿ, ಚಿನ್ನಪ್ಪ ಮುಳ್ಳೂರ ಸೇರಿದಂತೆ ಇತರರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 