ಸಿಡಿಲು ಬಡಿದು ಮೃತಪಟ್ಟ ಬಾಲಪ್ಪ ಕಳಸದ ಕುಟುಂಬಕ್ಕೆ ಶಾಸಕ ಯಾದವಾಡ ಸಾಂತ್ವನ
ರಾಮದುರ್ಗ 20: ಸೋಮವಾರ ಸಿಡಿಲು ಬಡಿದು ಮೃತಪಟ್ಟ ತಾಲೂಕಿನ ಚಿಕ್ಕೊಪ್ಪ ಎಸ್.ಕೆ ಗ್ರಾಮದ ಬಾಲಪ್ಪ ನಾಗಪ್ಪ ಕಳಸದ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಶಾಸಕ ಮಹಾದೇವಪ್ಪ ಯಾದವಾಡ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಪ್ರಕೃತಿಯಲ್ಲಿ ನಡೆಯುವ ವೈಪರಿತ್ಯದಿಂದಾಗುವ ಅವಘಡಕ್ಕೆ ಸರಕಾರದಿಂದ ಸುಮಾರು 4 ಲಕ್ಷ ಜಿಲ್ಲಾಧಿಕಾರಿಗಳ ನಿಧಿಯಿಂದ 1 ಲಕ್ಷ ಸೇರಿದಂತೆ ಒಟ್ಟು ರೂ. 5 ಲಕ್ಷ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ ಅವರು, ಮದುವೆಯಾಗದ ಯುವಕ ಬಲಿಯಾಗಿದ್ದು ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಮೃತನ ಕುಟುಂಬಕ್ಕೆ ತಲುಪಿಸುವಲ್ಲಿ ಅಧಿಕಾರಿಗಳು ಗಮನ ಹರಿಸಬೇಕು. ಪರಿಹಾರದಿಂದ ಬಂದ ಹಣವನ್ನು ಮೃತನ ತಾಯಿಯ ಭವಿಷ್ಯತ್ತಿನ ದೃಷ್ಠಿಯಿಂದ ಉಪಯುಕ್ತವಾಗುವ ನಿಟ್ಟಿನಲ್ಲಿ ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಗ್ರೇಡ್-2 ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಸಹಾಯಕ ಕೃಷಿ ನಿದರ್ೇಶಕ ಎಸ್.ಎಫ್. ಬೆಳವಟಗಿ, ಜಿ.ಪಂ ಸದಸ್ಯೆ ಶಿವಕ್ಕ ಬೆಳವಡಿ, ಎಪಿಎಂಸಿ ಸದಸ್ಯ ದ್ಯಾವಪ್ಪ ಬೆಳವಡಿ, ಬಾಬು ವಾಲಿ, ಮಹಾದೇವ ಲಕ್ಕನ್ನವರ, ರವಿ ಅಜ್ಜಿ, ಚಿನ್ನಪ್ಪ ಮುಳ್ಳೂರ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 