ಶಾಸಕರಿಂದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ
MLA distributes certificates to beneficiaries
ಬ್ಯಾಡಗಿ 23 : ಬ್ಯಾಡಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ 2025 26 ನೇ ಸಾಲಿನ ವಿಶೇಷ ಘಟಕದ ಯೋಜನೆ ಅಡಿ ಕೊಳವೆಬಾವಿ ಕೊರೆದು ನೀರಾವರಿ ಸೌಲಭ್ಯ ಕಲ್ಪಿಸುವ ಕಾಮಗಾರಿಗೆ ಆಯ್ಕೆಯಾದ ಫಲಾನುಭವಿಗಳಿಗೆ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಪ್ರಮಾಣ ಪತ್ರವನ್ನು ಇಂದು ವಿತರಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಟ್ಟು ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಆಯ್ಕೆಯಾಗಿದೆ 108 ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸುವ ಮೂಲಕ ಮಾತನಾಡಿದವರು ಬಸವಣ್ಣನವರ ತತ್ವದಂತೆ ಕಾಯಕವೇ ಕೈಲಾಸ ಎಂಬ ವಚನದಂತೆ ಆಯ್ಕೆಯಾದ ರೈತರು ತಮ್ಮ ಜಮೀನಿನಲ್ಲಿ ಕಾಯಕ ನಿಷ್ಠೆಯಿಂದ ಕೆಲಸ ಮಾಡಿ ಉತ್ತಮ ರೀತಿಯಲ್ಲಿ ಬೆಳೆ ಬೆಳೆದು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಂದೆ ಬಂದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಸಬುದ್ಧರಾಗಬೇಕು ಎಂದರು .
ರಾಜ್ಯ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ಕ್ಷೇತ್ರಕ್ಕೆ ನೀರಾವರಿ ಇಲಾಖೆ ವತಿಯಿಂದ 108 ರೈತರಿಗೆ ಉಚಿತ 5ಲಕ್ಷ ವೆಚ್ಚದಲ್ಲಿ ಉಚಿತ ಕೊಳವೆಬಾವಿ ನಿರ್ಮಿಸಲು ನೀಡಿದ್ದು ಪ್ರತಿ ರೈತರಿಗೆ ಇಲಾಖೆ ವತಿಯಿಂದ ಅವರ ಜಮೀನಿನಲ್ಲಿ ಕೊಳವೆಬಾವಿ ಕೊರೆದು ಪಂಪ್ಸೆಟ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುತ್ತಾರೆ. ಆಯ್ಕೆಯಾದ ಫಲಾನುಭವಿ ತಮ್ಮ ಜಮೀನಿಗೆ ಕೊಳವೆಬಾವಿ ಕೂರಸಿ ನಂತರ ತನ್ನ ಜಮೀನನ್ನು ಬೇರೆಯವರಿಗೆ ಲಾವಣಿ ಹಾಕಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ದಾನಪ್ಪ ಚೂರಿ, ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೆಸೀಮೆ, ಕಾಗಿನೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಆರ್ ಪಾಟೀಲ, ತಾಲೂಕು ಗ್ಯಾರೆಂಟಿ ಅಧ್ಯಕ್ಷ ಶಂಭನಗೌಡ ಪಾಟೀಲ, ತಾಲೂಕು ಇಓ ಕೆ ಮಲ್ಲಿಕಾರ್ಜುನ್, ತಹಸಿಲ್ದಾರ್ ಚಂದ್ರಶೇಖರ್ ನಾಯಕ್, ಸಣ್ಣನೀರಾವರಿ ಇಲಾಖೆಯ ಇಂಜಿನಿಯರ್ ಆರಾಧ್ಯ,ಮುಖಂಡರಾದ ಬಸವರಾಜ್ ಕೋಣನವರ, ಮಾರುತಿ ಅಚ್ಚಿಗೇರಿ, ಬೀರ್ಪ ಬಣಕಾರ್, ಮಲ್ಲಿಕಾರ್ಜುನಪ್ಪ ಕರಿ ಲಿಂಗಪ್ಪನವರ್, ರುದ್ರ್ಪ ಹೊಂಕಣ, ರಮೇಶ್ ಕೋಟಿಯವರ್, ಹಾಗೂ ಅನೇಕ ಮುಖಂಡರು ಮತ್ತು ಫಲಾನುಭವಿ ರೈತರುಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 