ಆನೆಗೆ ಮದವೇರಿ ಸಹಾಯಕ ಮಾವುತನನ್ನೆ ದಾರುಣವಾಗಿ ಕೊಂದ ಘಟನೆ
Madaveri's helper Mavuthan was brutally killed by an elephant
ಆನೆಗೆ ಮದವೇರಿ ಸಹಾಯಕ ಮಾವುತನನ್ನೆ ದಾರುಣವಾಗಿ ಕೊಂದ ಘಟನೆ
ಹಾರೂಗೇರಿ 23 : ಆನೆಗೆ ಮದವೇರಿ ಸಹಾಯಕ ಮಾವುತನನ್ನೆ ದಾರುಣವಾಗಿ ಕೊಂದ ಘಟನೆ ರಾಯಬಾಗ ತಾಲೂಕಿನ ಸುಕ್ಷೇತ್ರ ಅಲಖನೂರಿನ ಕರೆಸಿದ್ದೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಅಥಣಿ ತಾಲೂಕಿನ ಭರಮಕೋಡಿಯ ಕರೆಪ್ಪ ಸಖಾರಾಮ ಬೇವನೂರ (28) ಮೃತ ವ್ಯಕ್ತಿ. ಕಳೆದ ಎಂಟು ವರ್ಷಗಳಿಂದ ಅಲಖನೂರ ಗ್ರಾಮದ ಕರೆಸಿದ್ದೇಶ್ವರ ದೇವಸ್ಥಾನದಲ್ಲಿರುವ ದ್ರುವ (ಗಂಡು ಆನೆ) ಆನೆಗೆ (ಮಾವುತನಿಗೆ ಸಹಾಯಕ) ಕವಾಡಿಗನಾಗಿ ಕೆಲಸ ನಿರ್ವಹಿಸುತ್ತಿದ್ದನು. ಸೋಮವಾರ ಬೆಳಿಗ್ಗೆ ಆನೆಗೆ ಆಹಾರ, ಸ್ವಚ್ಛತೆ ಕೆಲಸದಲ್ಲಿ ನಿರತನಾಗಿದ್ದ ವೇಳೆ, ಆನೆಗೆ ಮದವೇರಿ ಸೊಂಡಿಲಿನಿಂದ ಹೊಡೆದು, ಕಾಲಿನಿಂದ ತುಳಿದು ಸಾಯಿಸಿದೆ. ಮೃತ ಕರೆಪ್ಪ ಬೇವನೂರ ಪತ್ನಿಗೆ ಕಳೆದ 10 ದಿನಗಳ ಹಿಂದೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ಮಾಳಪ್ಪ ಪೂಜಾರಿ ಭೇಟಿ ನೀಡಿ ಪರೀಶೀಲಿಸಿದರು. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 