ಮಡಿವಾಳ ಮಾಚಿದೇವ ರವರ ಜಯಂತಿ
Madiwala Machideva's birthday
ಬೀಳಗಿ 01 : ಬಸವಣ್ಣವನರ ಅನುಭವ ಮಂಟಪದ ದಾರಿಯಲ್ಲಿ ನಮ್ಮ ಸಂಸತ ಭವನ ನಿರ್ಮಾಣವಾಗಿದೆ. ಸರಿಸಮಾಜ ನಿರ್ಮಾಣ ಮಾಡುವಲ್ಲಿ ಪ್ರಥಮದಲ್ಲಿ ಬಸವಣ್ಣನವರ ಕೊಡುಗೆ ಅಪಾರ. ಸರಿ ಸಮಾನದ ಸಮಾಜ ನಿರ್ಮಾಣಕ್ಕೆ ಇವತ್ತಿಗೂ ಆಗುತ್ತಿಲ್ಲ. ಎಲ್ಲರೂ ನಮ್ಮ ಸಮಾಜಕ್ಕೆ ಅಂಟಿಕೊಂಡಿದ್ದೇವೆ ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಮಡಿವಾಳ ಮಾಚಿದೇವ ರವರ ಜಯಂತಿಯ ಅಧ್ಯಕ್ಷತೆ ವಹಿಸಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಸರಿಸಮಾಜದ ನಿರ್ಮಾಣಕ್ಕೆ ಬಸವಣ್ಣನವರು ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಮಡಿವಾಳ ಸಮಾಜ ಭಾಂದವರು ತಮ್ಮ ಮಕ್ಕಳಿಗೆ ಉನ್ನತ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಬೇಕು. ಸಮಾಜದ ಯಾವುದೇ ಸಮಸ್ಯೆ ಇದ್ದರು ನನ್ನ ಗಮನಕ್ಕೆ ತರಬೇಕು. ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ಹೇಳಿದರು.
ಸಮಾನ ಸಮಾಜ ನಿರ್ಮಾಣ ಇವತ್ತಿಗೂ ಆಗುತ್ತಿಲ್ಲ. ಎಲ್ಲರೂ ನಮ್ಮ ನಮ್ಮ ಸಮಾಜಕ್ಕೆ ಅಂಟಿಕೊಂಡಿದ್ದೇವೆ. ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತವಾಗಿ ಯಾರು ಆಗಬಾರದು. ಶಿಕ್ಷಣ ದಿಂದ ಎಲ್ಲವು ಸಾಧಿಸಲು ಸಾಧ್ಯ. ದಾಸನಿಕ ಶರಣರ ಹಿತವಚನಗಳು ಅನುಕೂಲಕ್ಕೆ ದಾರಿ ದೀಪವಾಗಿದೆ ಎಂದರು.
ಗ್ಯಾರಂಟಿ ಸಮಿತಿ ತಾಲೂಕಾ ಅಧ್ಯಕ್ಷ ಅಣವೀರಯ್ಯ ಪ್ಯಾಟೀಮಠ, ತಾಪಂ ಇಒ ಶ್ರೀನಿವಾಸ ಪಾಟೀಲ, ಸಿಪಿಐ ಎಚ್ ಬಿ.ಸಣ್ಣಮನಿ, ಗೋವಿಂದಪ್ಪ ಅರಳಿಕಟ್ಟಿ, ಸಿಡಿಪಿಒ ಕವಟೇಕರ, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಗೋಪಿ ಮಡಿವಾಳರ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ಹಣಮಂತ ಕಾಖಂಡಕಿ ಹಣಮಂತ ಮಡಿವಾಳ, ಜಿಲ್ಲಾ ಕೋಶ್ಯಾಧ್ಯಕ್ಷ ಮಲ್ಲು ಮಡಿವಾಳರ, ಜಿ.ಆರ್.ಪಾಟೀಲ, ಬಸವರಾಜ ಹಳ್ಳದಮನಿ, ಶಿಕ್ಷಣ ಇಲಾಖೆ ದೈಹಿಕ ಪರಿವಿಕ್ಷಕ ಸಂಗಪ್ಪ ಎತ್ತಿನಮನಿ, ಹಣಮಂತ ಮಡಿವಾಳರ, ಸಿದ್ದು ಸಾರಾವರಿ, ಈರ್ಪ ಮಡಿವಾಳರ, ಪುಂಡಲೀಕ ಮಡಿವಾಳರ, ಶ್ರೀಶೈಲ ಮಡಿವಾಳರ, ಸುರೇಶ ಮಡಿವಾಳರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 