ಬಳ್ಳಾರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಶರಣರು ಭಕ್ತಿ ಚೆಲ್ಲಿ ಕ್ರಾಂತಿ ಮಾಡಿದವರು: ಬಸವರಾಜೇಂದ್ರ ಶರಣರು
ಬಳ್ಳಾರಿ 01: ಮಡಿವಾಳ ಮಾಚಿದೇವರು ವಚನಗಳ ಮೂಲಕ ಸಮಾಜದ ಕೊಳಕು ತೊಳೆದು ಹಾಕಿದವರು. ಶರಣರು ರಕ್ತ ಚೆಲ್ಲಿ ಕ್ರಾಂತಿ ಮಾಡಿದವರಲ್ಲ, ಭಕ್ತಿ ಚೆಲ್ಲಿ ಕ್ರಾಂತಿ ಮಾಡಿದವರು. ಆ ಶರಣರಲ್ಲಿ ಮಡಿವಾಳ ಮಾಚಿದೇವರು ಕೂಡ ಒಬ್ಬರಾಗಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಝಂಜರವಾಡನ ಶ್ರೀ ಮಾಚಿದೇವ ಯೋಗ ಮಂದಿರ ಟ್ರಸ್ಟ್ ನ ಬಸರಾಜೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದಲ್ಲಿ ಶನಿವಾರ ಏರಿ್ಡಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಮಾಚಿದೇವರು ಸಮಾಜದ ಶ್ರೇಷ್ಠ ವಚನಕಾರರಲ್ಲಿ ಒಬ್ಬರು. ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಶರಣರ ಅಗ್ರ ಗಣ್ಯ ಬಳಗದಲ್ಲಿ ಅತ್ಯಂತ ಪ್ರಕಾಶಮಾನವಾಗಿ ಕಂಡುಬಂದವರು ಎಂದರು.
ಕ್ರಿ.ಶ 1120 ರಲ್ಲಿ ಬಿಜಾಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ದೇವರ ಹಿಪ್ಪರಗಿಯಲ್ಲಿ ತಂದೆ ಪರುವತಯ್ಯ ತಾಯಿ ಸುಜ್ನಾನವ್ವ ದಂಪತಿಗಳ ಮಗನಾಗಿ ಮಡಿವಾಳ ಮಾಚಿದೇವರು ಜನಿಸಿದರು. ಶಿವಶರಣರ ಹಾಗೂ ಕಾಯಕದಲ್ಲಿ ನಿಷ್ಠೆಯುಳ್ಳ ಮೈಲಿಗೆಯ ಬಟ್ಟೆಗಳನ್ನು ‘ಮಡಿ’ ಮಾಡಿ ಮುಟ್ಟಿಸುವ ಕಾಯಕ ಇವರಾದಾಗಿತ್ತು ಎಂದು ವಿವರಿಸಿದರು.
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದರು. ಮಡಿವಾಳ ಸಮುದಾಯದ ಜನರಲ್ಲಿ ವಿಶಾಲ ಮನೋಧರ್ಮ ಇದೆ. ಎಂದು ಹೇಳಿದರು.
ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. 12ನೇ ಶತಮಾನದ ಕಾಲದಲ್ಲಿ ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ವಚನಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಡಿವಾಳರ ಸಂಘ ಅಧ್ಯಕ್ಷ ಎನ್.ಧನಂಜಯ ಹಮಲ್ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಎಂ.ನಾಗಭೂಷಣ ಬಾಪುರ ತಂಡದಿಂದ ವಚನ ಗಾಯನ ಪ್ರಸ್ತುತ ಪಡಿಸಿದರು.
*ಸಂಭ್ರಮದ ಮೆರವಣಿಗೆ:*
ಮಡಿವಾಳ ಮಾಚಿದೇವ ಜಯಂತಿಯ ಅಂಗವಾಗಿ ಏರಿ್ಡಸಿದ್ದ ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡು ಸಂಭ್ರಮದಿಂದ ನಡೆಯಿತು.
ಮೆರವಣಿಗೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಮುನಿಸಿಪಲ್ ಮೈದಾನದಲ್ಲಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಅವರು ಚಾಲನೆ ನೀಡಿಸರು.
ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.