ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಶೋಭಾಯಮಾನವಾದ ಪಂಚಕಳಸಗಳು
Magnificent panchakalas on Srigavisiddheshwar Gaduge
ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಶೋಭಾಯಮಾನವಾದ ಪಂಚಕಳಸಗಳು
ಕೊಪ್ಪಳ 11: ಸಂಸ್ಥಾನ ಶ್ರೀಗವಿಮಠದಲ್ಲಿಂದು ದಿನಾಂಕ 11-01-2025 ರಂದು ಶನಿವಾರ ಸಂಜೆ 5 ಗಂಟೆಗೆಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಪಂಚಕಳಸಗಳು ಶೋಭಾಯಮಾನವಾದವು. ಸಾಮಾನ್ಯವಾಗಿಎಲ್ಲ ಮಠಮಾನ್ಯಗಳಿಗೆ ಒಂದೇ ಕಳಸವಿರುತ್ತದೆ. ಆದರೆ ಕೊಪ್ಪಳದ ಶ್ರೀಗವಿಮಠದ ಕರ್ತೃ ಶ್ರೀಗವಿಸಿದ್ಧೇಶ್ವರ ಗದ್ದುಗೆಯ ಮೇಲೆ ಐದು ಕಳಸಗಳು ಶೋಭಾಯಮಾನವಾಗಿರುತ್ತವೆ. ರಥೋತ್ಸವದ ದಿವಸಗಳು ಸಮೀಪಿಸುತ್ತಿರುವಾಗ ಈ ಐದು ಕಳಸಗಳನ್ನು ಒಂದು ವಾರದ ಮೊದಲೇ ಕೆಳಗೆ ಇಳಿಸಿಕೊಂಡು ಆಯಾಓಣಿಯದೈವದವರುಕೊಂಡೊಯ್ಯುತ್ತಾರೆ.
ನಂತರ ಆವುಗಳನ್ನು ತೊಳೆದು ತಿಕ್ಕಿ ಸ್ವಚ್ಚಗೊಳಿಸಿ ಶೃಂಗಾರಗೊಳಿಸಿ ಶ್ರೀಗವಿಮಠಕ್ಕೆ ಶ್ರಧ್ದಾ ಭಕ್ತಿಯಿಂದ ಭಜನೆ, ಡೋಲು, ಭಕ್ತಿ ಭಾವದಿಂದ ಶ್ರೀಮಠಕ್ಕೆ ತರುತ್ತಾರೆ. ಈ ಪಂಚಕಳಸಗಳನ್ನು ಆಯಾಓಣಿಯದೈವದವರು ಶ್ರೀ ಗವಿಮಠಕ್ಕೆತಂದು ಏರಿಸಿ ಪೂಜೆ ಮಾಡಿಸಿ ಪ್ರಸಾದ ಪಡೆದು ಮರಳುತ್ತಾರೆ. ಇದು ಪ್ರತಿವರ್ಷದ ಸಂಪ್ರದಾಯ ಹಾಗೂ ಪದ್ಧತಿ. ಭಕ್ತರು ಶ್ರೀಗವಿಮಠದ ಗೋಪುರಕ್ಕೆ ಏರಿಸಿದ ಐದು ಕಳಸಗಳನ್ನು ನೋಡಿ ಪುಳಕಿತರಾಗುತ್ತಾರೆ. ಜಂಗಮಾರಾಧನೆ: ಗವಿಸಿದ್ಧೇಶ್ವರ ಜತ್ರಾ ಮಹೋತ್ಸವದ ನಿಮಿತ್ಯ ಶ್ರೀಮಠದಲ್ಲಿ ಅನೇಕ ಧಾರ್ಮಿಕ ವಿಧಿ ವಿಧಾನಗಳ ಕಾರ್ಯಗಳು ಜರುಗುತ್ತವೆ.ಪಂಚ ಕಳಸಗಳ ಕಳಸಾರೋಹಣ ನಂತರಇದೇಉರಿನಎಲ್ಲಜಂಗಮಪುಂಗವರಿಗೆ ಭೂರಿ ಭೋಜನ ಪ್ರಸಾದ, ಜಂಗಮರಾಧನೆಕಾರ್ಯ ಅನೂಚಾನವಾಗಿ ನಡೆದು ಬಂದಿದೆ. ಪ್ರಸಾದದತರುವಾಯದಕ್ಷಿಣೆ ಹಾಗೂ ತಾಂಬೂಲಾಧಿಗಳನ್ನು ನೀಡಿಜಂಗಮ ಯೋಗಿಗಳ ಸಮಾರಾಧನೆಯು ಸಾಯಂಕಾಲ ನೆರವೇರಿತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 