ಮಹಾಜಪಯೋಗಕ್ಕೆ ಜೀವನವನ್ನು ಪಾವನ ಮಾಡುವ ಶಕ್ತಿಯಿದೆ: ಹರ್ಷಾನಂದಶ್ರೀ
Mahajapayoga has the power to purify life: Harshanandashree
ಜಮಖಂಡಿ 20: ಮಹಾಶಿವರಾತ್ರಿ ನಿಮಿತ್ತ ಮಹಾಜಪಯೋಗ ಮಾಡಬೇಕು. ಮಹಾಜಪಯೋಗ ಮಾಡುವುದರಿಂದ ಮಾನಸಿಕ, ಶಾರೀರಿಕ ಸ್ಥಿತಿ ಸ್ಥಿರಗೊಳ್ಳುತ್ತವೆ. ಮಾಡುವ ಎಲ್ಲ ಕೆಲಸಗಳು ಯಶಸ್ವಿಯಾಗುತ್ತವೆ ಎಂದು ಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ಹುಲ್ಯಾಳ ಗ್ರಾಮದ ಸುಕ್ಷೇತ್ರ ವೇದಾಂತಕೇಸರಿ ಮಲ್ಲಿಕಾರ್ಜುನ ಗುರುದೇವಾಶ್ರಮದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ನಡೆದ ಮಹಾಜಪಯೋಗ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಆಶೀರ್ವಚನ ನೀಡಿದರು.
ಮೈಗೂರಿನ ಶಿವಾನಂದ ಮಠದ ಗುರುಪ್ರಸಾದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಮಹಾಜಪಯೋಗಕ್ಕೆ ಜೀವನವನ್ನು ಪಾವನ ಮಾಡುವ ಶಕ್ತಿಯಿದೆ. ಮಹಾಜಪಯೋಗದಿಂದ ಎಲ್ಲ ಭವರೋಗಗಳು ದೂರವಾಗುತ್ತವೆ ಎಂದು ಆಶೀರ್ವಚನ ನೀಡಿದರು.
ಲಿಂಗನೂರಿನ ಶಿವಪುತ್ರ ಅವಧೂತ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಎಲ್ಲವನ್ನು ಕರುಣಿಸಿ ಉಪಭೋಗಿಸಲು ಅವಕಾಶ ಕಲ್ಪಿಸಿರುವ ಶಿವನಿಗೆ ಧನ್ಯವಾದ ಮತ್ತು ನಮಸ್ಕಾರ ಹೇಳುವುದೆ ಓಂ ನಮಶಿವಾಯಃ ಮಂತ್ರವಾಗಿದೆ ಎಂದು ಆಶೀರ್ವಚನ ನೀಡಿದರು.
ಸಿದ್ದಾಪುರ ಅಡವಿಸಿದ್ಧೇಶ್ವರ ಮಠದ ಮಾತೋಶ್ರೀ ಅಕ್ಕಮಹಾದೇವಿ ಆಶೀರ್ವಚನ ನೀಡಿದರು. ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿದರು. ಮುತ್ತಿನಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಋಷಿಕೇಶದ ಗಂಗಾನಂದ ಮಹಾರಾಜರು, ಕುಂಚನೂರಿನ ಲಕ್ಕಪ್ಪ ಮುತ್ಯಾ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.
ಮಹಾಭಾರತದ ದ್ರೌಪದಿ ವಸ್ತ್ರಾಪಹರಣ ಸನ್ನಿವೇಶ ಕುರಿತು ಬೆಂಗಳೂರಿನ ಬಾಲಕಿ ರಿಷಿಕಾ ವಿ. ಬೀಳಗಿ ಭರತನಾಟ್ಯ ಪ್ರದರ್ಶಿಸಿದರು. ಗುರುದೇವ ಸಂಗೀತ ಬಳಗದ ಕಲಾವಿದರಾದ ಗುರುಬಸಗೌಡ ಪಾಟೀಲ, ಪರಮೇಶ್ವರ ತೇಲಿ, ರಾಮಚಂದ್ರ ಹೂಗಾರ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ಮಹಾಪ್ರಸಾದ ದಾಸೋಹ ಮಾಡಿದ ಎಲ್ಲ ಸದ್ಭಕ್ತರನ್ನು ಸನ್ಮಾನಿಸಲಾಯಿತು. ಹುಲ್ಯಾಳ ಗ್ರಾಮದ ಯುವಕರು ಭಕ್ತಿಗೀತೆಗಳನ್ನು ಹಾಡಿದರು. ಗುರುಪಾದುಕಾ ಮಹಾಪೂಜೆ, ಸದ್ಭಕ್ತರಿಂದ 12 ಜ್ಯೋತಿರ್ಲಿಂಗಗಳ ಮಹಾಪೂಜೆ, 30 ಜನ ಸದ್ಭಕ್ತರಿಗೆ ಲಿಂಗದೀಕ್ಷೆ, ಸುಮಾರು 2 ಸಾವಿರ ಜನ ಮುತೈದೆಯರ ಉಡಿತುಂಬುವ ಕಾರ್ಯಕ್ರಮಗಳು ನಡೆದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 