ಜಮಖಂಡಿಯಲ್ಲಿ ಮಹಾರಾಣಾ ಪ್ರತಾಪಸಿಂಹ ಜಯಂತಿ ಸಂಭ್ರಮ
Maharana Pratap Singh Jayanti celebrated in Jamkhandi
ಲೋಕದರ್ಶನ ವರದಿ
ಜಮಖಂಡಿ 29: ವೀರ ಶಿರೋಮಣಿ ಮಹಾರಾಣಾ ಪ್ರತಾಪಸಿಂಹ ಅವರ ಜಯಂತಿಯನ್ನು ನಗರದ ಮಹಾರಾಣಾ ಪ್ರತಾಪಸಿಂಹ ರಾಜಪೂತ ಸಮಾಜ ಸೇವಾ ಸಮಿತಿಯಿಂದ ಸೋಮವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಎಸ್.ಬಿ. ಮಟೋಳಿ, "ಮಹಾರಾಣಾ ಪ್ರತಾಪಸಿಂಹರು ದೇಶ, ಧರ್ಮ ಮತ್ತು ಸ್ವಾಭಿಮಾನದ ರಕ್ಷಣೆಗಾಗಿ ಹೋರಾಡಿದ ಮಹಾನ್ ಯೋಧ. ಅವರ ತ್ಯಾಗ, ಶೌರ್ಯ ಮತ್ತು ದೇಶಭಕ್ತಿ ಇಂದಿನ ಪೀಳಿಗೆಗೆ ಆದರ್ಶವಾಗಿದೆ" ಎಂದು ಹೇಳಿದರು.
ಮುಖ್ಯ ಅತಿಥಿ ಸಂತೋಷಸಿಂಗ್ ಹಲವಾಯಿ ಮಾತನಾಡಿ, ಮಹಾರಾಣಾ ಪ್ರತಾಪಸಿಂಹರ ಶೌರ್ಯ, ಹಳದಿಘಾಟಿ ಯುದ್ಧದ ಸಾಹಸ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು. ವಿವಿಧ ಗಣ್ಯರು ಪ್ರತಾಪಸಿಂಹರ ಜೀವನ ಆದರ್ಶಗಳನ್ನು ಯುವಜನರು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 