ಮಹೇಶ ಅಣ್ಣಾಸಾಹೇಬ ಬಾಕಳೆಗೆ ವಿವೇಕ ಸೇವಾ ಪ್ರಶಸ್ತಿ
Mahesh Annasaheb Bakale receives Viveka Seva Award
ಮಾಂಜರಿ, 19 : ಎಲ್ಲ ಪರಂಪರೆಗಳಲ್ಲಿ ಸನ್ಯಾಸಿ ಪರಂಪರೆ ದೊಡ್ಡದು. ಸ್ವಾಮಿ ವಿವೇಕಾನಂದರು ಸನ್ಯಾಸಿ ಜೊತೆಗೆ ಯೋಧರು ಸಹ ಆಗಿದ್ದರು. ಅವರ ಸ್ಮರಣೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಪ್ರಾಂತ ಕಾರ್ಯವಾಹ ರಾಘವೇಂದ್ರಜಿ ಕಾಗವಾಡ ಹೇಳಿದರು.
ಶನಿವಾರ ಸಂಜೆ ಯಕ್ಸಂಬಾ ಪಟ್ಟಣದ ಮರಾಠಾ ಭವನದಲ್ಲಿ ವಿವೇಕ ಬಳಗದ ಸ್ವಾಮಿ ವಿವೇಕಾನಂದ ಯುವ ಅಭಿವೃದ್ಧಿ ಆರ್ಥಿಕ ಸಂಸ್ಥೆಯವರು ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ 163ನೇ ಜಯಂತಿ, ಬೆಳ್ಳಿ ಮಹೋತ್ಸವ ಹಾಗೂ ವಿವೇಕ ಸೇವಾ ಸನ್ಮಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ನಮ್ಮ ದೇಶ ಪಶು ಸಂಪದ್ಭರಿತವಾಗಿದೆ, ನಮಗೆ ಅಮೇರಿಕೆಯ ಆದರ್ಶ ಬೇಡ, ನಮ್ಮ ದೇಶದ ಸಂಸ್ಕಾರ ಮತ್ತು ಸಂಸ್ಕೃತಿ ಬೇಕು. ಸ್ವಾಮಿ ವಿವೇಕಾನಂದರ ಕಾರಣದಿಂದಲೇಧರ್ಮ ಉಳಿದಿದೆ. ನಮ್ಮ ದೇಶದಲ್ಲಿ ಸನ್ಯಾಸಿಗಳಿಗೆ ಮತ್ತು ಸ್ವಾಮಿಗಳಿಗೆ ಗೌರವ ನೀಡುವ ಪರಂಪರೆಯಿದೆ ಇದೆ ಎಂದು ಅವರು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಜೋಡಕುರಳಿ ಚಿದ್ರಾನಾನಂದ ಭಾರತಿ ಸ್ವಾಮೀಜಿ ಮಾತನಾಡಿ. ಇಂದು ನಮ್ಮನಾವೆ ಬ್ಯಾನರ್ ಹುಟ್ಟು ಹಬ್ಬ ಹಚ್ಚಿಕೊಂಡು ಆಚರಿಸಕೊಳ್ಳುತ್ತಿದ್ದೇವೆ. ಆದರೆ ಸಮಾಜ ಆಚರಣೆ ಮಾಡಬೇಕು. ಅಂದಾಗ ಬೆಲೆ ಬರುತ್ತದೆ ಎಂದು ಹೇಳಿದರು.
2026ರ ವಿವೇಕ ಸೇವಾ ಪುರಸ್ಕಾರವನ್ನು ಸಮಾಜಿಕ ಚಿಂತಕ ಮಹೇಶ ಅಣ್ಣಾಸಾಹೇಬ ಬಾಕಳೆಯವರಿಗೆ ನೀಡಿ ಸನ್ಮಾನಿಸಿದರು. ಆರ್.ಎಸ್.ಎಸ್ನ ವಿಭಾಗ ಕಾರ್ಯವಾಹ ಸಂಜಯ ಅಡಕೆ ಇತರರಿದ್ದರು. ಉತ್ತಮ ಕಾಟಕರೆ ಸ್ವಾಗತಿಸಿದರು. ಬಾಲಚಂದ್ರ ಬಾಕಳೆ ಪ್ರಾಸ್ತಾವಿಕ ಮಾತನಾಡಿದರು. ಆರ್.ಎ. ಕೆರಗುಟ್ಟಿ ನಿರೂಪಿಸಿದರು. ಖೋತ ವಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 