ಸಿದ್ಧಗಂಗಾ ರತ್ನ ಪ್ರಶಸ್ತಿಗೆ ಮಹೇಶ ಶಿವಶರಣ ಭಾಜನ
Mahesh Shivasharan Bhajana for Siddaganga Ratna Award
ಸಿದ್ಧಗಂಗಾ ರತ್ನ ಪ್ರಶಸ್ತಿಗೆ ಮಹೇಶ ಶಿವಶರಣ ಭಾಜನ
ವಿಜಯಪುರ 26: ವಿಜಯಪುರ ಜಿಲ್ಲೆಯ ನಗರ ನಿವಾಸಿ ಕಲಾವಿದ ಮಹೇಶ ಶಿವಶರಣ ಅವರು ಸಿದ್ಧಗಂಗಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಹೇಶ ಶಿವಶರಣ ಅವರು ಕಲಾ ಕ್ಷೇತ್ರದಲ್ಲಿ ನಿಸ್ವಾರ್ಥ ಮತ್ತು ಪ್ರಾಮಾಣಿಕವಾಗಿ ಶಕ್ತಿಮೀರಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದೆ.
ಅನಾಥ, ನಿರ್ಗತಿಕ ಹಾಗೂ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಶಿವಕುಮಾರ ಸ್ವಾಮೀಜಿ ಗಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಸಿದ್ಧಗಂಗಾ ಕಿರಿಯ ಪ್ರಾಥಮಿಕ ಶಾಲೆ ತುರಕನಗೇರಿ ತಾಽ ತಾಳಿಕೋಟಿ ಜಿ. ವಿಜಯಪುರ ವತಿಯಿಂದ ತ್ರಿವಿದ ದಾಸೋಹಿ ಡಾ. ಶಿವಕುಮಾರ ಮಹಾಸ್ವಾಮೀಜಿಯವರ 118 ನೇ ಜಯಂತ್ಯೋತ್ಸವ ಹಾಗೂ ಸಿದ್ಧಗಂಗಾ ಕಿರಿಯ ಪ್ರಾಥಮಿಕ ಶಾಲೆಯ 7ನೇ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ಯ “ಸಿದ್ಧಗಂಗಾ ರತ್ನ ಪ್ರಶಸ್ತಿ”ಯನ್ನು ಕಲಾವಿದ ಮಹೇಶ ಶಿವಶರಣ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಶೂದ್ದೀನ ಇನಾಂದಾರ ಹಾಗೂ ಬಸವರಾಜ ಹೂಗಾರ ಸೇರಿದಂತೆ ರಜಾಕ ಇನಾಮದಾರ, ಅಲ್ತಾಪ ಇನಾಮದಾರ, ವಿರೇಶ ಹಿರೇಮಠ, ಅಮರೇಶ ಬಸವಪಟ್ಟಣ, ಮಂಜುನಾಥ ಮೋಪಗಾರ, ಪ್ರವೀಣ ಮೋಪಗಾರ ಸೇರಿದಂತೆ ಮುಂತಾದವರು ಇದ್ದರು.
ಮಹೇಶ ಶಿವಶರಣ ಸಿದ್ಧಗಂಗಾ ರತ್ನ ಪ್ರಶಸ್ತಿ ಪಡೆದ ಹಿನ್ನೆಲೆ ಸ್ನೇಹಿತರು, ಹಿತೈಷಿಗಳು, ಕಲಾಭಿಮಾನಿಗಳು, ಕುಟಂಬದ ಸದಸ್ಯರು ಸೇರಿದಂತೆ ಅಪಾರ ಬಂಧು-ಬಳಗದವರು ಶುಭಕೋರಿ ಹಾರೈಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 