ಮುದ್ದಾಬಳ್ಳಿ ಶಾಲೆಯಲ್ಲಿ ಮುದ್ದಾದ ಮಕ್ಕಳಿಂದ ಮಕರ ಸಂಕ್ರಮಣ ಆಚರಣೆ
Makar Sankram celebration by cute children at Muddaballi School
ಕೊಪ್ಪಳ 16: ಕೊಪ್ಪಳ ಸಮೀಪದ ಮುದ್ದಾಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಚೇತನ ಕಾರ್ಯಕ್ರಮದ ಪ್ರಯುಕ್ತವಾಗಿ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು ಮುಖ್ಯೋಪಾಧ್ಯಯರಾದ ರೇಖಾ ಕುಲಕರ್ಣಿ ಕಾರ್ಯಕ್ರಮದ ಕುರಿತು ಸಮಗ್ರವಾಗಿ ತಿಳಿಸಿದರು ಅದರಲ್ಲೂ ಮಕ್ಕಳಿಂದ ಹಳ್ಳಿ ಸೊಬಗಿನ ಸುಗ್ಗಿಯ ಹಾಡಿನ ನೃತ್ಯ ಮಾಡುವುದರ ಮೂಲಕ ಸಂಕ್ರಾಂತಿಯ ಆಚರಣೆ ಮಾಡಲಾಯಿತು.ಪ್ರಸ್ತಾವಿಕವಾಗಿ ಎಪಿಎಫ್ ಶೋಭನಾ ಸಂಕ್ರಾಂತಿಯ ಉತ್ತರಾಯಣ ಪುಣ್ಯಕಾಲ ಕುರಿತು ಮಕ್ಕಳಿಗೆ ತಿಳಿಹೇಳಿದರು,
ಕಾರ್ಯಕ್ರಮದ ಕುರಿತಾಗಿ ಮಾಹಿತಿ ಪಡೆದುಕೊಂಡ ಉಪನಿರ್ದೇಶಕ ಎಲ್ ಡಿ ಜೋಶಿ, ಸಚೇತನ ಕಾರ್ಯಕ್ರಮದ ನೋಡಲ್ ಅಧಿಕಾರಿ ಗವಿಸಿದ್ದಯ್ಯ ಬೆಣಕಲ್ಮಠ ಶಾಲೆಯ ಮುಖ್ಯೋಪಾಧ್ಯಾಯರಿಗೂ ಹಾಗೂ ಸಿಬ್ಬಂದಿ ವರ್ಗದವರಿಗೂ ವಿಶೇಷ ಅಭಿನಂದನೆ ಸಲ್ಲಿಸಿದರು ಹಾಗೂ ಸಮೂಹ ಸಂಪನ್ಮೂಲ ಅಧಿಕಾರಿ ಮುದ್ದು ಬಸವ ಗುಡ್ಲಾನೂರು ಹರ್ಷ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಎಸ್ ಡಿಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಯುವಕರು ಪಾಲ್ಗೊಂಡಿದ್ದರು ಇದೇ ಸಂದರ್ಭದಲ್ಲಿ ಶಿಕ್ಷಕಿಯರಾದ ಸವಿತಾ ಕಲ್ಯಾಣಿ ,ಗೀತಾ ವಿ,ಶ್ವೇತ, ಹಾಜರಿದ್ದರು. ನಾಲ್ಕನೇ ತರಗತಿ ವಿದ್ಯಾರ್ಥಿನಿ ಕುಮಾರಿ ರಂಜಿತ ಪ್ರಾರ್ಥಿಸಿದರು, ಶಿಕ್ಷಕರಾದ ಮಹಮದ್ ಇಸ್ಮಾಯಿಲ್ ಸ್ವಾಗತಿಸಿದರು, ಶಿಕ್ಷಕಿಯರಾದ ಸವಿತಾ ಬಿ ಕೆ ವಂದಿಸಿದರು,ರಾಜಶ್ರೀ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 