ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೋಳಿಸಿ: ಕೇಂದ್ರ ಸಚಿವ ಜೋಶಿ
Make the Kannada Sahitya Sammelan a success: Union Minister Joshi
ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೋಳಿಸಿ: ಕೇಂದ್ರ ಸಚಿವ ಜೋಶಿ
ಶಿಗ್ಗಾವಿ 11 : ಭಾರತ ಸರ್ಕಾರದ ಬಜೆಟ್ ಅಧಿವೇಶನವಿರುವ ಕಾರಣ ಪಟ್ಟಣದಲ್ಲಿ ನಡೆಯುತ್ತಿರುವ 5 ನೇ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರಲು ಆಗುತ್ತಿಲ್ಲ ಆದ್ದರಿಂದ ನಾನು ವಿಷಾಧಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಹೇಳಿದರು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಶ್ರೇಷ್ಠ ಕವಿ, ತತ್ವಜ್ಞಾನಿ ಕನಕದಾಸರು ಹಾಗೂ ಸಂತ ಶಿಶುನಾಳ ಶರೀಫರ ತವರೂರಾದ ಶಿಗ್ಗಾವಿಯಲ್ಲಿ ಐದನೇವರ್ಷದ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ಸಮ್ಮೇಳನವು ನಮ್ಮ ನಾಡಿನ ಸಾಹಿತ್ಯ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಮತ್ತು ಕನ್ನಡ ಭಾಷೆಯನ್ನು ಮತ್ತಷ್ಟು ಉತ್ತುಂಗಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ನಂಬಿಕೆ ನನಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಶಿಗ್ಗಾವಿ ತಾಲೂಕ ಘಟಕವು ಏರಿ್ಡಸಿರುವ ಈ ಸಮ್ಮೇಳನದಲ್ಲಿ ನಾಡಿನ ವಿವಿಧ ಭಾಗಗಳಿಂದ ಸಾಹಿತಿಗಳು, ಕವಿಗಳು, ವಿದ್ವಾಂಸರು ಮತ್ತು ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೋಳಿಸಿ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 